News Kannada
Wednesday, September 27 2023
ಮಂಗಳೂರು

ಬೆಳ್ತಂಗಡಿ: ಡಾ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ವಿಶ್ವ ಯೋಗ ದಿನಾಚರಣೆ

Untitled 2 Recovered Recovered Recovered 51
Photo Credit :

ಬೆಳ್ತಂಗಡಿ: ಧರ್ಮಸ್ಥಳ ಧರ್ಮಾಧಿಕಾರಿ ಡಾl ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಯೋಗ ಮತ್ತು ಶಾಂತಿವನ ಟ್ರಸ್ಟ್ ವತಿಯಿಂದ ಧರ್ಮಸ್ಥಳದಲ್ಲಿ ಜೂ. 21 ರಂದು 8 ನೇ ವಿಶ್ವ ಯೋಗ ದಿನಾಚರಣೆಯನ್ನು ವಿಶಿಷ್ಠ ರೀತಿಯಲ್ಲಿ ಆಚರಿಸಲಾಗುತ್ತದೆ.

ದ.ಕ.,ಉಡುಪಿ, ಚಿಕಮಗಳೂರು, ಉತ್ತರ ಕನ್ನಡ, ಹಾಸನ, ಬೆಳಗಾವಿ, ಶಿವಮೊಗ್ಗ, ದಾವಣಗೆರೆ, ಹಾಗೂ ಧಾರವಾಡ ಸೇರಿದಂತೆ ಒಟ್ಟು 4,164 ಶಿಕ್ಷಕರಿಗೆ ಯೋಗ ತರಬೇತಿ ನೀಡಲಾಗಿದೆ. ಪ್ರತಿ ವರ್ಷ 4 ಲಕ್ಷ ವಿದ್ಯಾರ್ಥಿಗಳು ಯೋಗಾಸನಗಳ ಅಭ್ಯಾಸ ಮಾಡುತ್ತಿದ್ದಾರೆ.

2014 ರಲ್ಲಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆಗಳ 47 ಕೇಂದ್ರಗಳಲ್ಲಿ 62,827 ವಿದ್ಯಾರ್ಥಿಗಳು ಏಕಕಾಲದಲ್ಲಿ ನಡೆಸಿದ ಯೋಗ ಪ್ರಾತ್ಯಕ್ಷಿಕೆ ವಿಶ್ವ ದಾಖಲೆಗೆ ಭಾಜನವಾಗಿದ್ದು ಇದೀಗ 8 ನೇ ವರ್ಷದ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಿಂದ ತರಬೇತಿ ಪಡೆದ ಯೋಗ ಶಿಕ್ಷಕರು ಅವರವರ ಶಾಲೆ ಹಾಗೂ ಸಾರ್ವಜನಿಕರಿಗೆ ಯೋಗ ತರಬೇತಿಯನ್ನು ನೀಡುತ್ತಿದ್ದು ಜೂ. 21 ರಂದು ಬೆಳಿಗ್ಗೆ 7 ಗಂಟೆಗೆ ಏಕಕಾಲದಲ್ಲಿ ಸಾಮೂಹಿಕ ಯೋಗಾಸನಗಳ ಪ್ರದರ್ಶನ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಯೋಗ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಬೆಂಗಳೂರಿನ ಪ್ರಜ್ವಲ್ ಎಂ.ನಾಯಕ್ ಅವರಿಗೆ ಡಾl ಹೆಗ್ಗಡೆ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಯೋಗ ರತ್ನ ಪ್ರಶಸ್ತಿ- 2022 ನ್ನು ನೀಡಿ ಗೌರವಿಸಲಾಗುವುದು ಎಂದು ಯೋಜನೆಯ ನಿರ್ದೇಶಕ ಡಾ. ಶಶಿಕಾಂತ ಜೈನ್ ಮತ್ತು ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

See also  ಮೈಸೂರಿನಲ್ಲಿ ಗಮನ ಸೆಳೆಯುತ್ತಿರುವ ಮೋದಿಯ ಮರಳು ಶಿಲ್ಪಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು