News Kannada
Saturday, September 30 2023
ಮಂಗಳೂರು

ಮಂಗಳೂರು: ಜು.19 ರಿಂದ ಅಹವಾಲು ಸ್ವೀಕರಿಸಲಿರುವ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು

KASARGOD: The excise department personnel seized Rs 36.47 lakh in cash that was being transported without documents.
Photo Credit : Twitter

ಮಂಗಳೂರು : ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಜು.19 ರಿಂದ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಮತ್ತು ಮೂಡಬಿದ್ರೆ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ.

ವಿವರ ಇಂತಿದೆ:
ಜು.19ರ ಮಂಗಳವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ನಿರೀಕ್ಷಣಾ ಮಂದಿರದಲ್ಲಿ, ಮಧ್ಯಾಹ್ನ 2.30 ರಿಂದ ಸಂಜೆ 4.30ರವರೆಗೆ ಪುತ್ತೂರು ನಿರೀಕ್ಷಣಾ ಮಂದಿರದಲ್ಲಿ, ಮತ್ತು ಜು.20ರ ಬುಧವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ, ಮಧ್ಯಾಹ್ನ 2 ರಿಂದ ಸಂಜೆ 4ರ ವರೆಗೆ ಬಂಟ್ವಾಳ ನಿರೀಕ್ಷಣಾ ಮಂದಿರದಲ್ಲಿ ಮತ್ತು ಜು.21ರ ಗುರುವಾರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30 ಗಂಟೆಯವರೆಗೆÀ ಮೂಡಬಿದ್ರೆ ನಿರೀಕ್ಷಣಾ ಮಂದಿರದಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ.

ಜು.20ರ ಸಂಜೆ 4.15ಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಕಟ್ಟಡದ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ಜನಸಂಪರ್ಕ ಸಭೆ ನಡೆಯಲಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ಉಪಾಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

See also  ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ 8ನೇ ವಿಶ್ವಯೋಗ ದಿನಾಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು