News Kannada
Friday, September 22 2023
ಮಂಗಳೂರು

ಮೂಡುಬಿದಿರೆ: ಮಾವಿನಕಟ್ಟೆ ರಸ್ತೆ ದುರಸ್ತಿಗೆ ಸಾರ್ವಜನಿಕರ ಆಗ್ರಹ

Public demands repair of Manikatte road
Photo Credit : News Kannada

ಮೂಡುಬಿದಿರೆ: ಮೂಲ್ಕಿ ರಾಜ್ಯ ಹೆದ್ದಾರಿ 70ರ ಮೂಡುಬಿದಿರೆ ಸಮೀಪದ ಮಾವಿನಕಟ್ಟೆ ಬಳಿ ರಸ್ತೆ ತೀವ್ರ ಹದಗೆಟ್ಟಿದ್ದು ಸಂಚಾರಕ್ಕೆ ತೊಂದರೆಯನ್ನುಂಟು ಮಾಡುತ್ತಿದೆ.

ರಸ್ತೆಯಲ್ಲಿ ಬೃಹತ್ ಗಾತ್ರದ ಹೊಂಡ ಗುಂಡಿಗಳು ಸೃಷ್ಟಿಯಾಗಿದ್ದು ವಾಹನ ಸವಾರರ ಪ್ರಾಣಕ್ಕೆ ಕಂಟಕವಾಗಿ ಪರಿಣಮಿಸಿದೆ. ಇನ್ನು ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು ಅಪಘಾತಕ್ಕೆ ಎಡೆ ಮಾಡಿಕೊಟ್ಟಂತಾಗಿದೆ.

ಇತ್ತೀಚೆಗಷ್ಟೇ ಈ ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು ಆದರೆ ಕಳಪೆ ಕಾಮಗಾರಿಯಿಂದ ಇದೀಗ ರಸ್ತೆಯ ಡಾಮರೀಕರಣ ಅಲ್ಲಲ್ಲಿ ಸಂಪೂರ್ಣ ಕಿತ್ತು ಹೋಗಿದ್ದು ಮಳೆ ಬರುವ ಕಾರಣ ರಸ್ತೆಯು ಇನ್ನಷ್ಟು ಹದಗೆಟ್ಟು ರಸ್ತೆಯಲ್ಲಿ ಬೃಹತ್ ಗಾತ್ರದ ಗುಂಡಿಗಳು ನಿರ್ಮಾಣವಾಗಿವೆ.

ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಇತ್ತ ಗಮನಹರಿಸಿ ಕೂಡಲೇ ಹೊಂಡವನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ

See also  ಬಂಟ್ವಾಳ ತಾಲೂಕಿನಾದ್ಯಂತ ಮೊಳಗಿದ ನಾಡಗೀತೆ, ಕನ್ನಡ ಹಾಡು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು