News Kannada
Thursday, November 30 2023
ಮಂಗಳೂರು

ಬಂಟ್ವಾಳ: ನಕಲಿ ಜೇನು ಮಾರಾಟಗಾರರನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು

Public lashes out at fake honey sellers
Photo Credit : By Author

ಬಂಟ್ವಾಳ: ಬಿ.ಸಿ.ರೋಡ್‌ ಸಮೀಪದ ಕೈಕಂಬದಲ್ಲಿ ಗುರುವಾರ ಬೆಳಗ್ಗೆ ಕಟ್ಟಡದ ಮೇಲೆ ಕಟ್ಟಿದ್ದ ಜೇನುಗೂಡಿಂದ ಜೇನು ತೆಗೆದು ಕೊಡುತ್ತೇವೆ ಎಂದು ಜನರನ್ನು ವಂಚಿಸಿ ಬೆಲ್ಲದ ಪಾಕ ಮಾರಾಟ ಮಾಡುತ್ತಿದ್ದ ನಕಲಿ ಜೇನು ಮಾರಾಟಗಾರರ ತಂಡಕ್ಕೆ ಜನರು ಧರ್ಮದೇಟು ನೀಡಿ ಓಡಿಸಿದ್ದಾರೆ.

ಕೈಕಂಬ ಜಂಕ್ಷನ್‌ನಲ್ಲಿರುವ ಕಟ್ಟಡದ ಮೇಲಂತಸ್ತಿನಲ್ಲಿ ಜೇನು ಗೂಡು ಕಟ್ಟಿತ್ತು. ಜೇನು ಗೂಡನ್ನು ತೆರವುಗೊಳಿಸಿಕೊಡುವುದಾಗಿ ಅನ್ಯರಾಜ್ಯದ ಕಾರ್ಮಿಕರ ತಂಡ ಆಗಮಿಸಿತ್ತು. ಇತ್ತೀಚೆಗಷ್ಟೆ ಗೂಡು ಕಟ್ಟಿದ್ದರಿಂದ ಅದರಲ್ಲಿ ಜೇನು ಸಂಗ್ರಹಗೊಂಡಿರಲಿಲ್ಲ. ಈ ನಡುವೆ ತಂಡ ಬೆಲ್ಲಪಾಕ ಹಾಗೂ ಜೇನು ಮೇಣವನ್ನು ಮೊದ ಸಿದ್ಧಪಡಿಸಿಟ್ಟುಕೊಂಡು ಈಗಷ್ಟೇ ತೆಗೆದ ಜೇನು ತುಪ್ಪ ಎಂದು ಜನರನ್ನು ನಂಬಿಸಿ ಮಾರಾಟ ಮಾಡಿ ಸಾವಿರ ರೂ. ಸಂಪಾದಿಸಿದ್ದರು. ಕೆಲಹೊತ್ತಿನಲ್ಲಿಯೇ ಇದು ಬೆಲ್ಲದ ಪಾಕ ಎಂದು ಅರಿವಾಗಿ ಆಕ್ರೋಶಿತ ಸಾರ್ವಜನಿಕರು ಕಾರ್ಮಿಕರನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಇನ್ನು ಎಲ್ಲೂ ನಕಲಿ ಜೇನುತುಪ್ಪ ಮಾರಾಟಮಾಡದಂತೆ ಎಚ್ಚರಿಕೆ ನೀಡಿ ಓಡಿಸಿದ್ದಾರೆಂದು ತಿಳಿದುಬಂದಿದೆ.

See also  ಮಂಗಳೂರು: ಹೃದಯಾಘಾತದಿಂದ ಪೊಲೀಸ್ ಹೆಡ್ ಕಾನ್ಸ್​​ಟೇಬಲ್‌ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು