News Kannada
Monday, October 02 2023
ಮಂಗಳೂರು

ಬಂಟ್ವಾಳ: ವಿದ್ಯುತ್ ಕಾಯಿಲ್ ನ ಮೂಲಕ ಶಾಕ್ ಹೊಡೆದು ವ್ಯಕ್ತಿ ಸಾವು

Four killed in electrocution at flour mill
Photo Credit :
ಬಂಟ್ವಾಳ: ಸ್ನಾನ ಮಾಡಲು ಉಪಯೋಗಿಸುವ ವಿದ್ಯುತ್ ಕಾಯಿಲ್ ನ ಮೂಲಕ ಶಾಕ್ ಹೊಡೆದು ವ್ಯಕ್ತಿಯೋರ್ವರು ಸ್ನಾನಗೃಹದಲ್ಲಿಯೇ  ಮೃತಪಟ್ಟ ಘಟನೆ ಬ್ರಹ್ಮರಕೊಟ್ಲು ಎಂಬಲ್ಲಿ ನಡೆದಿದೆ.
ಮೂಲತಃ ನೀರು ಮಾರ್ಗ ನಿವಾಸಿಯಾಗಿರುವ ಪ್ರಸ್ತುತ ಬ್ರಹ್ಮರಕೊಟ್ಲು ಕಳ್ಳಿಗೆ ಚಂದ್ರಿಗೆಯ ಪರಿಯೋಡಿಬೀಡು ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿರುವ ಹೇಮಚಂದ್ರ (49) ಮೃತಪಟ್ಟ ವ್ಯಕ್ತಿ.
ಹೇಮಚಂದ್ರ ಅವರ ಪತ್ನಿ ಮನೆ ಚಂದ್ರಿಗೆಯಲ್ಲಿದ್ದು, ಅಲ್ಲೇ ಸಮೀಪ ಪೆರಿಯೋಡಿಬೀಡು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಇಬ್ಬರು ಮಂಗಳೂರಿಗೆ ಕೆಲಸಕ್ಕೆ ಹೋಗುತ್ತಿದ್ದರು. ಹೇಮಚಂದ್ರ ಅವರು ರಾತ್ರಿ ಕೆಲಸ ಮುಗಿಸಿ  ಮನೆಗೆ ಬಂದವರು ಸ್ನಾನ ಮಾಡಲು  ಸ್ನಾನಗೃಹಕ್ಕೆ ತೆರಳಿದ್ದರು. ‌ಆದರೆ ಸುಮಾರು ಹೊತ್ತು ಕಳೆದರೂ ಗಂಡ ಸ್ನಾನ ಮಾಡಿ ಹೊರಗೆ ಬರದೆ ಇರುವುದನ್ನು ಕಂಡು ಬಾಗಿಲು ತಟ್ಟಿದರೂ ಕರೆದರೂ ಯಾವುದೇ ಪ್ರತಿಕ್ರಿಯೆ ನೀಡದೆ ಇರುವಾಗ ಹೆದರಿಕೆಯಿಂದ ಬಾಗಿಲು ಮುರಿದು ನೋಡಿದಾಗ ಹೇಮಚಂದ್ರ ಅವರು ಸ್ನಾನಗೃಹದಲ್ಲಿ ಬಕೆಟ್ ನಲ್ಲಿ ಕೈಯಿದ್ದು ಕೆಳಗೆ ಬಿದ್ದಿದ್ದರು.
ನೋಡಿದಾಗ ಬಿಸಿನೀರು ಕಾಯಿಸುವ ವಿದ್ಯುತ್ ಕಾಯಿಲ್ ಮೂಲಕ ಶಾಕ್ ಹೊಡೆದು ಅವರು ಕೆಳಗೆ ಬಿದಿರುವುದು ಗಮನಕ್ಕೆ ಬಂದಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದೆಯಾದರೂ ಅದಾಗಲೇ ಅವರು ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದರು.
ಬಂಟ್ವಾಳ ನಗರ ಠಾಣಾ ಎಸ್.ಐ.ಅವಿನಾಶ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
See also  ಅಳದಂಗಡಿಯಲ್ಲಿ ಹೋಟೆಲ್ ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು