News Kannada
Sunday, September 24 2023
ಮಂಗಳೂರು

ಬಂಟ್ವಾಳ: ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು

A car fell into a ditch after the driver lost control of his sleep.
Photo Credit : By Author
ಬಂಟ್ವಾಳ: ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಬದಿಯ ಹೊಂಡಕ್ಕೆ  ಉರುಳಿ  ಬಿದ್ದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದ್ದು, ಚಾಲಕ ಯಾವುದೇ ಗಾಯವಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾನೆ.
ನರಿಕೊಂಬು ನಿವಾಸಿ  ಕುಶಾಂತ್ ಅವರು ಪವಾಡಸದೃಶವಾಗಿ ಪಾರಾದ ವ್ಯಕ್ತಿ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಯ ಪಾಣೆಮಂಗಳೂರು ಎಂಬಲ್ಲಿ ಈ ಘಟನೆ ನಡೆದಿದ್ದು, ರಸ್ತೆ ಕೆಳಗೆ ಸುಮಾರು 30 ಅಡಿ ಅಳಕ್ಕೆ ಕಾರು ಉರುಳಿ ಬಿದ್ದಿದೆ.
ಕುಶಾಂತ್ ಅವರು ಜನರೇಟರ್ ಮ್ಯಾಕಾನಿಕ್ ಕೆಲಸಗಾರನಾಗಿದ್ದು, ಉಡುಪಿಯಲ್ಲಿ ಜನರೇಟರ್ ರಿಪೇರಿ ಮುಗಿಸಿ ಬರುತ್ತಿದ್ದ ವೇಳೆ ಘಟನೆ ನಡದಿದೆ.
ಉಡುಪಿಯಿಂದ ಬರುವ ವೇಳೆ ಮಂಗಳೂರಿನಲ್ಲಿ ಇಬ್ಬರು ಕೆಲಸಗಾರರನ್ನು ಮನೆಗೆ ಡ್ರಾಪ್ ಮಾಡಿ ಅ ಬಳಿಕ ಕುಶಾಂತ್ ಒಬ್ಬನೇ ಕಾರಿನಲ್ಲಿ ಬರುತ್ತಿದ್ದರು. ಮುಂಜಾವಿನ ವೇಳೆ ಸುಮಾರು 2.50 ರ ವೇಳೆ ನಿದ್ದೆಯ ಮಂಪರಿನಲ್ಲಿ ಕಾರು ನಿಯಂತ್ರಣ ತಪ್ಪಿ ಕಳೆಗೆ ಬಿದ್ದಿದೆ.
ಇಂದು ಬೆಳಿಗ್ಗೆ ಕಾರನ್ನು ವಿಜಯಲಕ್ಷ್ಮಿ ಅವರ ಕ್ರೇನ್ ಬಳಸಿ ಕಾರನ್ನು ಮೇಲಕ್ಕೆತ್ತಲಾಗಿದೆ. ಘಟನೆಯ ಬಳಿಕ ದೃಶ್ಯವನ್ನು ನೋಡುವ ತವಕದಿಂದ ಹೆದ್ದಾರಿ ಯಲ್ಲಿ ಸಂಚಾರಕ್ಕೆ ಅಡಚಣೆಯಾಗದಂತೆ  ಮೆಲ್ಕಾರ್ ಟ್ರಾಫಿಕ್ ಎಸ್.ಐ‌.‌ಮೂರ್ತಿ, ಎ.ಎಸ್.ಐ.ಸುರೇಶ್ ಪಡಾರ್ ಹಾಗೂ ಸಿಬ್ಬಂದಿ ಗಳು ಸ್ಥಳದಲ್ಲಿ ದ್ದು ಸಮಸ್ಯೆ ಬಗೆಹರಿಸಿದರು.
See also  ಫೋನ್ ಕರೆಗಳ ಮೂಲಕ ಯುವತಿಗೆ ಕಿರುಕುಳ: ಎಫ್ಐಆರ್ ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು