News Kannada
Monday, December 11 2023
ಮಂಗಳೂರು

ಬೆಳ್ತಂಗಡಿ: ಸೌತಡ್ಕ ಸೇವಾಧಾಮದಲ್ಲಿ ವಿನಾಯಕ ರಾವ್ ಹುಟ್ಟುಹಬ್ಬ ಆಚರಣೆ

Vinayaka Rao's birthday celebrations at Sauthadka Sevadhama
Photo Credit : By Author

ಬೆಳ್ತಂಗಡಿ: ಸೇವಾಭಾರತಿ ಕನ್ಯಾಡಿ ಇದರ ಅಂಗಸಂಸ್ಥೆ ಸೌತಡ್ಕದ “‘ಸೇವಾಧಾಮ”‘ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರದಲ್ಲಿ ಸಂಸ್ಥಾಪಕ ಕೆ. ವಿನಾಯಕ ರಾವ್ ರವರ 52ನೇ ವರ್ಷದ ಜನ್ಮದಿನಾಚರಣೆಯನ್ನು ಜು.29 ರಂದು ಸೇವಾಧಾಮ ಪರಿಸರದಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕೆ. ವಿನಾಯಕ ರಾವ್ ಮಾತನಾಡಿ” ಸೇವಾಧಾಮ”ದಲ್ಲಿ ಹುಟ್ಟುಹಬ್ಬ ಆಚರಣೆಗೆ 17 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದವರು ಜತೆಗಿರುವುದು ತುಂಬಾ ಸಂತೋಷ ನೀಡಿದೆ . ಅವರು ಸೇವಾಧಾಮದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅದರಿಂದ ಸಿಗುವ ಮಾಹಿತಿ, ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಪೂರ್ಣ ಪ್ರಯೋಜನ ಪಡೆದಲ್ಲಿ ಜನ್ಮ ದಿನಾಚರಣೆಯೂ ಸಾರ್ಥಕವನಿಸುತ್ತದೆ ಎಂದು ಅಭಿಪ್ರಾಯ ಪಟ್ಟರು.

ಇತ್ತೀಚೆಗೆ ಬೆನ್ನುಹುರಿ ಅಪಘಾತಕ್ಕೊಳಗಾದ ಬೆಳ್ತಂಗಡಿ ತಾಲೂಕು ನಿಡ್ಲೆ ಗ್ರಾಮದ ಧರ್ಣಪ್ಪ ಪೂಜಾರಿ ಹಾಗೂ ಕಡಬ ತಾಲೂಕು ಮರ್ಧಾಳ ಗ್ರಾಮದ ಗಿರೀಶ್ ರೈ ರವರಿಗೆ ಉಚಿತವಾಗಿ ಗಾಲಿಕುರ್ಚಿಗಳನ್ನು ವಿತರಿಸಲಾಯಿತು. ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಭಟ್, ಸೇವಾಭಾರತಿಯ ಕಾರ್ಯದರ್ಶಿ ಸ್ವರ್ಣಗೌರಿ, ಟ್ರಸ್ಟಿ ಬಾಲಕೃಷ್ಣ, ಸಂಸ್ಥೆಯ ಹಿತೈಷಿ ಮಂಜುಳಾ ವಿ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸೇವಾಭಾರತಿ ಸಲಹಾ ಮಂಡಳಿಯ ಸದಸ್ಯರಾದ ವಿಷ್ಣು ಪ್ರಸಾದ್ ತೆಂಕಿಲ್ಲಾಯ, ಸ್ವಯಂ ಸೇವಕರು, ಸನಿವಾಸಿಗಳ ಪೋಷಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅಕೌಂಟೆಂಟ್ .ಅಕ್ಷತಾ ಸ್ವಾಗತಿಸಿ, ನಿರೂಪಿಸಿದರು. ಸೀನಿಯರ್ ಮ್ಯಾನೇಜರ್ ಚರಣ್ ಕುಮಾರ್ ಎಂ. ವಂದಿಸಿದರು.

See also  ಗುತ್ತಿಗೆದಾರ ಸಂತೋಷ್ ಪ್ರಕರಣ ಸರ್ಕಾರ ಹಸ್ತಕ್ಷೇಪ ಮಾಡಲ್ಲ:ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು