News Kannada
Wednesday, November 29 2023
ಮಂಗಳೂರು

ಉಜಿರೆ: ಸುವರ್ಣ ಸೌಧ ಸಭಾಂಗಣದಲ್ಲಿ ಶಾಲಾ ಮಕ್ಕಳಿಗೆ ಚದುರಂಗ ಸ್ಪರ್ಧೆ

Ujire: Chess competition for school children at Suvarna Soudha auditorium
Photo Credit : By Author

ಉಜಿರೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ , ಸಹಯೋಗದಲ್ಲಿ ಗ್ರಾಮ ಪಂಚಾಯತ್ ಉಜಿರೆ ವತಿಯಿಂದ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಗ್ರಾಮ ಪಂಚಾಯಿತಿ ಗ್ರಂಥಾಲಯದ “ಓದುವ ಬೆಳಕು” ಕಾರ್ಯಕ್ರಮದ ಅಂಗವಾಗಿ “ಗ್ರಾಮ ಚದುರಂಗ ಆಟ ಆಡೋಣ ಅಭಿಯಾನ”ವು ಉಜಿರೆ ಗ್ರಾಮ ಪಂಚಾಯಿತಿಯ ಸುವರ್ಣ ಸೌಧ ಸಭಾಂಗಣದಲ್ಲಿ ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ಮಕ್ಕಳಿಗೆ ಚದುರಂಗ (ಚೆಸ್) ಆಟ ನಡೆಯಿತು.‌

ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾ ಧರ್ ಉದ್ಘಾಟಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ . ಆರ್ .ಶೆಟ್ಟಿ, ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಕಾರ್ಯದರ್ಶಿ ಜಯಂತ್ ಯು.ಬಿ, ಗ್ರಾ.ಪಂ ಸದಸ್ಯರುಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಾಬ್ದಿಕ್ ವರ್ಮ ಅವರ ನೇತೃತ್ವದಲ್ಲಿ,ಬದನಾಜೆ ಹೈಸ್ಕೂಲ್ ಶಿಕ್ಷಕಿ ಮೇಧಾ ಕೆ.ಉಸ್ತುವಾರಿಯಲ್ಲಿ ನಡೆದ ಚದುರಂಗ ಸ್ಪರ್ಧೆಯಲ್ಲಿ ಉಜಿರೆ ಗ್ರಾ.ಪಂ.ವ್ಯಾಪ್ತಿ ಯ ಒಟ್ಟು 140 ಮಕ್ಕಳು ಭಾಗವಹಿಸಿದ್ದರು.‌ವಿಜೇತರಾದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ,ಹಾಗೂ ಅಲ್ಲಿಂದ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ.ಆ .1 ಸೋಮವಾರ ಸುಮಾರು 150 ಮಕ್ಕಳಿಗೆ ಚದುರಂಗ ತರಬೇತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ. ಆರ್. ಶೆಟ್ಟಿ ‌ಚಾಲನೆ ನೀಡಿದ್ದರು.

See also  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜದ ಕಾರ್ಯ ತೃಪ್ತಿ ತಂದಿದೆ :ಉದ್ಯಮಿ ಸದಾಶಿವ ಶೆಟ್ಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು