News Kannada
Thursday, September 21 2023
ಮಂಗಳೂರು

ಮಂಗಳೂರು: ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾದೀಶರಾಗಿ ಸಿರಾಜುದ್ದೀನ್ ಎ. ಆಯ್ಕೆ

Mangaluru: Sirajuddin A has been elected as the Judge of the District and Sessions Court.
Photo Credit : News Kannada

ಮಂಗಳೂರು: ಮಂಗಳೂರಿನ ನ್ಯಾಯಾವಾದಿ ಸಿರಾಜುದ್ದೀನ್ ಎ. ಅವರು 2022ರ ಸಾಲಿನ ನೇರ ನೇಮಕಾತಿಯಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.

ಕಳೆದ 16 ವರ್ಷಗಳಿಂದ ಮಂಗಳೂರಿನಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಇವರು ಮಂಗಳೂರಿನ ಖ್ಯಾತ ನ್ಯಾಯಾವಾದಿಗಳಾದ ಅರುಣ್ ಬಂಗೇರ ಮತ್ತು ಅರುಣ್ ಕುಮಾರ್ ಶೆಟ್ಟಿಯವರ ಜೂನಿಯರ್ ನ್ಯಾಯಾವಾದಿಯಾಗಿ ಗುರುತಿಸಿಕೊಂಡಿದ್ದರು.

ಮೂಲತ: ಬೆಳ್ತಂಗಡಿ ತಾಲೂಕಿನವರಾದ ಇವರು ಇಳಂತಿಲದ ಇದ್ದಿನಬ್ಬ ಬ್ಯಾರಿ ಮತ್ತು ಮೈಮುನ ದಂಪತಿಗಳ ಸುಪುತ್ರರಾಗಿದ್ದಾರೆ. ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜ್ ನಲ್ಲಿ ಕಾನೂನು ಪದವಿ ಪಡೆದ ಇವರು ಮಡಂತ್ಯಾರ್ ನ ಸೆಕ್ರೆಡ್ ಹಾರ್ಟ್ ಕಾಲೇಜ್ ನಲ್ಲಿ ಬಿ. ಎ. ಡಿಗ್ರಿ ಓದಿದ್ದರು. ಪದ್ಮುಂಜದ ಸರಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಪಿಯುಸಿ ಓದಿದ ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉರುವಲುನಲ್ಲಿ ಪ್ರಾಥಮಿಕ ಶಿಕ್ಷಣವನ್ನು ಪಡೆದಿದ್ದಾರೆ. ಇವರು ಮಂಗಳೂರು ಬಾರ್ ಅಸೋಸಿಯೇಶನ್ ನ ಸದಸ್ಯರಾಗಿದ್ದಾರೆ.

See also  ಬೆಳ್ತಂಗಡಿ: ಸಮುದಾಯ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಶಾಸಕ ಹರೀಶ್ ಪೂಂಜಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು