News Kannada
Wednesday, September 27 2023
ಮಂಗಳೂರು

ಬೆಳ್ತಂಗಡಿ: ಭಾರಿ ಮಳೆಯಿಂದಾಗಿ ತಾಲೂಕಿನ ಕಿಂಡಿ ಅಣೆಕಟ್ಟುಗಳಲ್ಲಿ ತುಂಬಿದ ತ್ಯಾಜ್ಯ

Due to heavy rains, waste filled up in Kindi dams in the taluk
Photo Credit : By Author

ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ಬೆಳ್ತಂಗಡಿ ತಾಲೂಕಿನಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ನದಿ ನೀರಿನ ಮಟ್ಟ ಹೆಚ್ಚಾಗಿರುವ ನಡುವೆ ಕಿಂಡಿ ಅಣೆಕಟ್ಟುಗಳಲ್ಲಿ ಮರಮಟ್ಟುಗಳ ತ್ಯಾಜ್ಯ ತುಂಬಿವೆ.

ತಾಲೂಕಿನ ನೇತ್ರಾವತಿ, ಮೃತ್ಯುಂಜಯ, ಫಲ್ಗುಣಿ, ಸೋಮಾವತಿ ನದಿ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ಕಾಪು, ಕಡಂಬಳ್ಳಿ, ಕಲ್ಮಂಜ, ಪಜಿರಡ್ಕ, ನಿಡಿಗಲ್ ಸಹಿತ ಇತ್ತೀಚೆಗೆ ನಿರ್ಮಿಸಿದ ಕಿಂಡಿ ಅಣೆಕಟ್ಟುಗಳಲ್ಲಿ ತ್ಯಾಜ್ಯ ತುಂಬಿದೆ.

ಗುರುವಾರ ರಾತ್ರಿ ಪೂರ್ತಿ ಮಳೆ ಭಾರಿ ಮಳೆಯಾದ ಪರಿಣಾಮ ಉಜಿರೆ ಗಣೇಶ್ ಕಲಾ ಮಂದಿರ ಸಮೀಪ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಯಾರೂ ವಾಸ್ತವ್ಯ ಇಲ್ಲದ ಹಂಚಿನ ಹಳೇ ಮನೆಯೊಂದು ಧರಾಶಾಯಿಯಾಗಿದೆ. ಕೆಲವೆಡೆ ಅಡಿಕೆ ಸಸಿಗಳು ಗಾಳಿ ಮಳೆಗೆ ತುಂಡರಿಸಿ ಬಿದ್ದಿವೆ. ಗುರುವಾರ ಭಾರಿ ಮಳೆಯಿಂದಾಗಿ ತಾಲೂಕಿನ ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಯಿತು. ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ರಸ್ತೆಗಳು ಅಲ್ಲಲ್ಲಿ ಹೊಂಡ ಗುಂಡಿಯಾಗಿವೆ.

See also  ಬೆಂಗಳೂರು: ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ನಟ ಜಗ್ಗೇಶ್!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು