News Kannada
Friday, September 22 2023
ಮಂಗಳೂರು

ಮಂಗಳೂರು: ದ. ಕ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ರದ್ದು- ನಿಷೇಧಾಜ್ಞೆ ವಿಸ್ತರಣೆ

Night curfew lifted in Dakshina Kannada district, prohibitory orders extended
Photo Credit : News Kannada

ಮಂಗಳೂರು: ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಿಧಿಸಿದ್ದ ಕೆಲವು ನಿರ್ಬಂಧಗಳನ್ನು ಆ. 8ರ ಮುಂಜಾನೆಯಿಂದ ಅನ್ವಯವಾಗುವಂತೆ ರದ್ದುಗೊಳಿಸಲಾಗಿದೆ.

ಆದರೆ ಮಂಗಳೂರು ಪೊಲೀಸ್‌ ಕಮಿಷನರೆಟ್‌ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ನಿಷೇಧಾಜ್ಞೆಯನ್ನು ಆ. 14ರ ಮಧ್ಯರಾತ್ರಿ ವರೆಗೆ ವಿಸ್ತರಿಸಲಾಗಿದೆ.

ಎಲ್ಲ ವಾಣಿಜ್ಯ, ವ್ಯವಹಾರ ಮಳಿಗೆಗಳು, ಅಂಗಡಿಗಳು ಹಾಗೂ ಮದ್ಯದ ಅಂಗಡಿಗಳು ಆ. 8ರಿಂದ ಎಂದಿನಂತೆ ಕಾರ್ಯಾಚರಿಸಬಹುದಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಆದೇಶದಲ್ಲಿ ತಿಳಿಸಿದ್ದಾರೆ. ವಾಹನ ಸಂಚಾರಕ್ಕೆ ಯಾವುದೇ ನಿರ್ಬಂಧಗಳಿರುವುದಿಲ್ಲ. ಆದರೆ ಅನಗತ್ಯ ರಾತ್ರಿ ಸಂಚಾರ ಬೇಡ ಎಂದು ಹೇಳಿದ್ದಾರೆ.

See also  ಬೆಳ್ತಂಗಡಿ: ಬಜಿರೆ ಗ್ರಾಮದಲ್ಲಿ ಬಸವನ ಹುಳು ಕಾಟಕ್ಕೆ ಬಸವಳಿದ ಜನ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು