News Kannada
Friday, September 29 2023
ಮಂಗಳೂರು

ಮಂಗಳೂರು: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಬಂಧನ

Belagavi: SC hearing on border issue, high alert in District
Photo Credit : News Kannada

ಮಂಗಳೂರು: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಬೆಳಗ್ಗೆ 7 ಗಂಟೆಗೆ ತಲಪಾಡಿ ಚೆಕ್​ಪೋಸ್ಟ್ ಬಳಿ ಬಂಧಿಸಿದ್ದೇವೆ ಎಂದು ನಗರದಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್​ ಕುಮಾರ್ ಸುದ್ದಿಗೋಷ್ಠಿ​ಯಲ್ಲಿ ಹೇಳಿದರು.

ಬಂಧಿತರು ಶಿಯಾಬುದ್ದೀನ್ ಅಲಿ(33), ರಿಯಾಜ್(27) ಹಾಗೂ ಎಲಿಮಲೆಯ ಬಶೀರ್(29) ಎನ್ನಲಾಗಿದೆ.

ಪ್ರಕರಣದ ಕುರಿತು ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ ವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪಿಗಳಾದ ಮೂವರು ಪದೇ ಪದೇ ತಮ್ಮ ವಾಸ ಸ್ಥಾನವನ್ನು ಬಳಲಿಸಿಕೊಳ್ಳುತ್ತಿದ್ದರು ಅಲ್ಲದೆ ಅವರ ಶೋಧ ಕಾರ್ಯಕ್ಕೆ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು, ಖಚಿತ ಮಾಹಿತಿ ಪಡೆದುಕೊಂಡ ಪೋಲೀಸರ ತಂಡ ಇಂದು(ಗುರುವಾರ) ಆರೋಪಿಗಳನ್ನು ತಲಪಾಡಿಯ ಬಳಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಸದ್ಯ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ವಶಕ್ಕೆ ಪಡೆಯಲಾಗುವುದು, ಮಹಜರು, ಕೊಲೆಯಲ್ಲಿ ಬಳಸಿದ ವಾಹನ, ಆಯುಧಗಳನ್ನು ವಶಕ್ಕೆ ಪಡೆದ ಬಳಿಕ ಎನ್‌ಐಎಗೆ ಈ ಪ್ರಕರಣದ ತನಿಖೆಯನ್ನು ಹಸ್ತಾಂತರ ಮಾಡಲಾಗುವುದು ಎಂದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

See also  ಬಂಟ್ವಾಳ ತಾ. ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘಕ್ಕೆ 19.28 ಲಕ್ಷ ನಿವ್ವಳ ಲಾಭ ಶೇ.10 ಡಿವಿಡೆಂಟ್ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು