News Kannada
Wednesday, September 27 2023
ಮಂಗಳೂರು

ಮಂಗಳೂರು: ಮಕ್ಕಳ ಕೈಯ್ಯಲ್ಲಿದ್ದ ರಾಖಿ ತೆಗೆಸಿ ಕಸದ ಬುಟ್ಟಿಗೆ ಎಸೆದ ಶಿಕ್ಷಕರು!

Teachers remove rakhi from children's hands, throw them in dustbin
Photo Credit : Pixabay

ಮಂಗಳೂರು: ಮಕ್ಕಳ ಕೈಯ್ಯಲ್ಲಿದ್ದ ರಕ್ಷಾ ಬಂಧನದ ರಾಖಿ ಕಿತ್ತೆಸೆದ ಆರೋಪದ ಹಿನ್ನೆಲೆ ಪೋಷಕರು‌ ಮತ್ತು ಬಿಜೆಪಿ ಕಾರ್ಯಕರ್ತರಿಂದ ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿರುವ ಘಟನೆ ಮಂಗಳೂರು ಹೊರವಲಯದ ಕಾಟಿಪಳ್ಳದ ಖಾಸಗಿ ಶಾಲೆಯಲ್ಲಿ ನಡೆದಿದೆ.

ಕಾಟಿಪಳ್ಳದ ಇನ್ಫೆಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಿನ್ನೆ ‌ರಕ್ಷಾಬಂಧನ ಹಿನ್ನೆಲೆ ಕೈಗೆ ರಾಖಿ ಕಟ್ಟಿಕೊಂಡು ಮಕ್ಕಳು ಹೋಗಿದ್ದರು, ಆದರೆ ರಾಖಿ ತೆಗೆಸಿ ಕೆಲ ಶಿಕ್ಷಕರು ಕಸದ ಬುಟ್ಟಿಗೆ ಎಸೆದಿದ್ದಾರೆ ಎಂದು ಆರೋಪ ಕೇಳಿ ಬರುತ್ತಿದೆ. ಈ ಹಿನ್ನೆಲೆ ಶಾಲೆಗೆ ಆಗಮಿಸಿ ಮುಖ್ಯಶಿಕ್ಷಕ ಮತ್ತು ಶಿಕ್ಷಕರಿಗೆ ಪೋಷಕರ ತರಾಟೆ ತೆಗೆದುಕೊಂಡಿದ್ದಾರೆ.

ಬಿಜೆಪಿ ಯುವಮೋರ್ಛಾ ಕಾರ್ಯಕರ್ತರಿಂದಲೂ ಶಾಲಾಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಗುತ್ತಿದ್ದು, ಪೋಷಕರು ‌ಮತ್ತು ಶಿಕ್ಷಕರ ವಾಗ್ವಾದದ ಹಿನ್ನೆಲೆ ಸುರತ್ಕಲ್ ಪೊಲೀಸರ ಮಧ್ಯಪ್ರವೇಶಿಸಿದ್ದಾರೆ. ಫ್ರೆಂಡ್ ಶಿಪ್ ಬ್ಯಾಂಡ್ ಅಂದುಕೊಂಡು ತೆಗೆಸಿದ್ದಾಗಿ ಶಿಕ್ಷಕರ ಸಮಜಾಯಿಷಿ ಕೊಟ್ಟಿದ್ದು, ರಕ್ಷಾ ಬಂಧನ ಯಾವುದೇ ಕಾರಣಕ್ಕೂ ತೆಗೆಸಲ್ಲ ಅಂತ ಶಾಲಾ ಮುಖ್ಯಶಿಕ್ಷಕ ವಿಷಾಧ ವ್ಯಕ್ತಪಡಿಸಿದ್ದಾರೆ. ಶಿಕ್ಷಕರೇ ಮತ್ತೆ ಮಕ್ಕಳ ಕೈಗೆ ರಕ್ಷೆ ಕಟ್ಟುವಂತೆ ಪೋಷಕರ ಪಟ್ಟು ಹಿಡಿದ್ದಾರೆ.

See also  ಸಾಗರಮಾಲಾ ಯೋಜನೆಯಡಿ ದ.ಕ. ಜಿಲ್ಲೆಗೆ ರೂ. 880 ಕೋಟಿಯ ಅಭಿವೃದ್ಧಿ ಯೋಜನೆ: ನಳಿನ್ ಕುಮಾರ್ ಕಟೀಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು