News Kannada
Thursday, November 30 2023
ಮಂಗಳೂರು

ಉಳ್ಳಾಲ: ತಲಪಾಡಿ- ಮಂಗಳೂರು ಬಸ್ ಬಂದ್ ನಡೆಸಿ ಸಿಬ್ಬಂದಿ ಪ್ರತಿಭಟನೆ

MANGALORE 1
Photo Credit : News Kannada

ಉಳ್ಳಾಲ: ಸಂಚಾರಿ ಠಾಣಾ ಎಎಸ್ ಐ ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಘಟನೆ ತಲಪಾಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದ್ದು, ಕೃತ್ಯ ಖಂಡಿಸಿ ಬಸ್ ಸಿಬ್ಬಂದಿ ತಲಪಾಡಿ- ಸ್ಟೇಟ್ ಬ್ಯಾಂಕ್ ಚಲಿಸುವ ಬಸ್ ಬಂದ್ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಉಷಾ ಹೆಸರಿನ ಸಿಟಿ ಬಸ್ ನಿರ್ವಾಹಕ ರಾಜು ಎಂಬಾತನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೆಪ್ಪು ಸಂಚಾರಿ ಠಾಣೆಯ ಎಎಸ್ ಐ ಆಲ್ಬಟ್ ೯ ಲಸ್ರಾದೊ ಇಂದು ಬೆಳಿಗ್ಗೆ ತಲಪಾಡಿ ಬಳಿ ಸಿಟಿ ಬಸ್ಸುಗಳ ವಿರುದ್ಧ ಕೇಸುಗಳನ್ನು ಹಾಕುತ್ತಿದ್ದರು. ಈ ನಡುವೆ ನಿರ್ವಾಹಕನೋರ್ವನಿಗೆ ಹಲ್ಲೆ ನಡೆಸಿದ್ದಾರೆ . ಕೃತ್ಯ ಖಂಡಿಸಿದ ಬಸ್ ಸಿಬ್ಬಂದಿ ಬೆಳಗ್ಗಿನಿಂದ ಮಧ್ಯಾಹ್ನವರೆಗೂ ಬಸ್‌ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೆಲ ತಿಂಗಳುಗಳ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದ ಎಎಸ್ ಐ ಆಲ್ಬಟ್೯ ಲಸ್ರಾದೋ ತೊಕ್ಕೊಟ್ಟು ಫ್ಲೈಓವರಿನಡಿ ಕಾರೊಂದರಲ್ಲಿ ಸ್ಟಿಕರ್ ಇರುವುದರ ವಿರುದ್ಧ ದಂಡ ಹಾಕಿದ್ದರು. ಆದರೆ ಕಾರಿನಲ್ಲಿ ಸ್ವಾಮಿ ಕೊರಗಜ್ಜ ಸ್ಟಿಕರ್ ಇದ್ದು, ಇದನ್ನು ವಿರೋಧಿಸಿದ ಹಿನ್ನೆಲೆಯಲ್ಲಿ ಕಾರು ಮಾಲೀಕ ಸೇರಿದಂತೆ ಹಿಂದು ಸಂಘಟನೆ ಕಾರ್ಯಕರ್ತರು ತೊಕ್ಕೊಟ್ಟು ಜಂಕ್ಷನ್ನಿನಲ್ಲೇ ಪ್ರತಿಭಟನೆ ನಡೆಸಿ ಎಎಸ್ ಐ ವಜಾಗೊಳಿಸಲು ಆಗ್ರಹಿಸಿದ್ದರು.

See also  ಬೆಂಗಳೂರು: ಪ್ರವೀಣ್ ಹತ್ಯೆ ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ ಎಂದ ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು