News Kannada
Thursday, September 28 2023
ಮಂಗಳೂರು

ಬೆಳ್ತಂಗಡಿ: ಆ.15ರಂದು ಅಮೃತಮಹೋತ್ಸವದ ಸಂದೇಶ ನೀಡಲಿದ್ದಾರೆ ಡಿ. ವೀರೇಂದ್ರ ಹೆಗ್ಗಡೆ

Belthangady: Dr. Veerendra Heggade celebrates his 75th birthday today
Photo Credit : Wikimedia

ಬೆಳ್ತಂಗಡಿ: ರಾಜ್ಯ ಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸೋಮವಾರ ಬೆಳಿಗ್ಗೆ ಗಂಟೆ 8.45ಕ್ಕೆ ಉಜಿರೆಯಲ್ಲಿ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಅಮೃತಮಹೋತ್ಸವದ ಸಂದೇಶ ನೀಡುವರು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುವ ಕೆ.ಜಿ. ಯಿಂದ ಪಿ.ಜಿ. ವರೆಗಿನ ಎಲ್ಲಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಶಿಕ್ಷಕವೃಂದ, ಎನ್.ಸಿ.ಸಿ. ಕೆಡೆಟ್‍ಗಳು, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಸಮಾರಂಭದಲ್ಲಿ ಭಾಗವಹಿಸುವರು.

ವಿಶಿಷ್ಠ ಕಾರ್ಯಕ್ರಮ: ಹೆಗ್ಗಡೆಯವರ ಪರಿಕಲ್ಪನೆ ಮತ್ತು ನಿರ್ದೇಶನದಂತೆ ವಿನೂತನ ಕಾರ್ಯಕ್ರಮ ಒಂದನ್ನು ಆಯೋಜಿಸಲಾಗಿದೆ.

ಯುವಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು ದೇಶದ ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸುತ್ತಾರೆ. ಇಷ್ಟರ ವರೆಗೆ ದೇಶದ ಪ್ರಗತಿಗೆ ಹಿರಿಯರು ಶ್ರಮಿಸಿದ್ದಾರೆ. ಮುಂದಿನ ಹೊಣೆಗಾರಿಕೆಯನ್ನು ಯುವಜನತೆಗೆ ಒಪ್ಪಿಸುವ ಸೃಷ್ಟಿಯಿಂದ 75 ಮಂದಿ 75 ವರ್ಷ ಪೂರೈಸಿದ ಹಿರಿಯ ನಾಗರಿಕರಿಂದ 75 ಮಂದಿ ಯುವಕ, ಯುವತಿಯರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿ ದೇಶಪ್ರೇಮ, ದೇಶಭಕ್ತಿಯೊಂದಿಗೆ ರಾಷ್ಟ್ರದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವ ಕರ್ತವ್ಯ ಮತ್ತು ಹೊಣೆಗಾರಿಕೆಯನ್ನು ಹಸ್ತಾಂತರಿಸಲಾಗುವುದು. ಗುರು-ಹಿರಿಯರ ಪಕ್ವ ಅನುಭವ ಮತ್ತು ಮಾರ್ಗದರ್ಶನದಲ್ಲಿ ಯುವಜನತೆ ರಾಷ್ಟ್ರ ನಿರ್ಮಾಣದ ಪವಿತ್ರ ಕಾರ್ಯದಲ್ಲಿ ಭಾಗವಹಿಸಬೇಕೆಂಬುದು ಹೆಗ್ಗಡೆಯವರ ಆಶಯ ಮತ್ತು ಅಪೇಕ್ಷೆಯಾಗಿದೆ.

See also  ಮಂಗಳೂರು: ವೇಶ್ಯಾವಾಟಿಕೆ ದಂಧೆ - ಇಬ್ಬರು ಮಹಿಳೆಯರು ಸೇರಿ ಮೂವರು ಅರೆಸ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು