News Kannada
Saturday, September 23 2023
ಮಂಗಳೂರು

ಕಲ್ಲೇರಿ: ಮೃತಪಟ್ಟ ಸಂಬಂಧಿಯನ್ನು ನೋಡಲು ತೆರಳುತಿದ್ದಾಗ ಅಪಘಾತ, ಸವಾರ ಸಾವು

Unidentified body found in decomposed state at Panglai in Puttur
Photo Credit : IANS

ಕಲ್ಲೇರಿ: ಪುಂಜಾಲಕಟ್ಟೆ ಮೇಲಿನ ಪೇಟೆಯ ಶಾರದಾ ಮಂಟಪದ ಬಳಿ ಸೋಮವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಮೃತಪಟ್ಟ ಸಂಬಂಧಿಯನ್ನು ಆಸ್ಪತ್ರೆಗೆ ನೋಡಲು ಬರುತ್ತಿದ್ದಾಗ ಟಿಪ್ಪರ್ ರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತ ಪಟ್ಟಿದ್ದಾರೆ.

ಕಕ್ಕೆಪದವು ನಿವಾಸಿ ತುಂಬೆಯ ಐಟಿಐ ವಿದ್ಯಾರ್ಥಿ ಮಹಮ್ಮದ್ ಸಫಾನ್(20) ಎಂಬವರೇ ಸಾವನ್ನಪ್ಪಿದವರು.

ಪುಂಜಾಲಕಟ್ಟೆಯಲ್ಲಿ ಬೈಕ್ – ಬೈಕ್ ನಡುವೆ ಅಪಘಾತ ನಡೆದು ಕಾಲೇಜ್ ವಿದ್ಯಾರ್ಥಿ ಕರಾಯದ ಮಹಮ್ಮದ್ ಶಫೀಕ್(20) ಸಾವನ್ನಪ್ಪಿದ್ದು ಈ ವಿಚಾರ ತಿಳಿದು ಸಂಬಂಧಿ ಕಕ್ಕೆಪದವು ನಿವಾಸಿ ತುಂಬೆಯ ಐ.ಟಿ.ಐ. ವಿದ್ಯಾರ್ಥಿ ಮಹಮ್ಮದ್ ಸಫಾನ್(20) ಬೈಕ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಬರುತ್ತಿದ್ದಾಗ ಕುಪ್ಪೆಟ್ಟಿಯ ಹುಣ್ಸೆಕಟ್ಟೆ ಪಿಲಿಗೂಡು ಎಂಬಲ್ಲಿ ಟಿಪ್ಪರ್ ವಾಹನ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಲ್ಲಿದ್ದ ಸವಾರ ಮಹಮ್ಮದ್ ಸಫಾನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಡಿಕ್ಕಿ ಹೊಡೆದು ಟಿಪ್ಪರ್ ವಾಹನ ಪರಾರಿಯಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.

See also  ಬೆಳಗಾವಿ: ಬೈಕಿಗೆ  ಲಾರಿ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿನಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು