News Kannada
Wednesday, October 04 2023
ಮಂಗಳೂರು

ಸುಳ್ಯ: ವಿದ್ಯಾರ್ಥಿ ಹಲ್ಲೆ ಪ್ರಕರಣದ ಕೇಸು ದಾಖಲಿಸಲು ಕ್ಯಾಂಪಸ್ ಫ್ರಂಟ್ ಡಿವೈಎಸ್ಪಿಗೆ ಮನವಿ

Campus front dysp requested to register case of student assault case
Photo Credit : News Kannada

ಪುತ್ತೂರು: ಸುಳ್ಯ ತಾಲೂಕಿನ ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಮುಹಮ್ಮದ್ ಸನೀಫ್ ರವರನ್ನು ಸಹಪಾಠಿ ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದಾನೆ ಎಂದು ಆರೋಪಿಸಿ ಕ್ರೂರವಾಗಿ ಥಳಿಸಿ, ಕೊಲೆಯತ್ನ ನಡೆಸಿದ ಘಟನೆ ನಡೆದಿದ್ದು, ಬಂಧಿಸಿರುವ ಆರೋಪಿಗಳ ಮೇಲೆ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾ ಸಮಿತಿಯು ಪುತ್ತೂರು ಡಿವೈಎಸ್ಪಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಸನೀಫ್ ನೀಡಿದ ದೂರಿನ ಅನ್ವಯ ಆರೋಪಿಗಳ ವಿರುದ್ಧ ಐಪಿಸಿ ಕಲಂ 143,147,148,323,324,506 ಹಾಗೂ 149 ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮುಂದೆ ವಿದ್ಯಾರ್ಥಿನಿಯರೊಂದಿಗೆ ಮಾತನಾಡಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ವಿದ್ಯಾರ್ಥಿಗೆ ಜೀವ ಬೆದರಿಕೆ ಹಾಕಿದ್ದು ಮಾತ್ರವಲ್ಲದೆ ಕೊಲೆಯತ್ನ ನಡೆಸಿದ ಎಬಿವಿಪಿ ಗೂಂಡಾಗಳ ಮೇಲೆ ಕಲಂ 307 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇಂತಹಾ ಅನಾಹುತಗಳಿಗೆ ಇದು ಎಡೆಮಾಡಿಕೊಡಬಹುದು. ಆದ್ದರಿಂದ ಇಲಾಖೆಯು ಇದನ್ನು ಗಂಭೀರವಾಗಿ ಪರಿಗಣಿಸಿ ಬಂಧಿತ ಆರೋಪಿಗಳ ಮೇಲೆ ಸೆಕ್ಷನ್ 307 ಅಡಿಯಲ್ಲಿ ಕೇಸು ದಾಖಲಿಸಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ನಿಯೋಗದಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ಕೋಶಾಧಿಕಾರಿ ಸವಾದ್ ಕಲ್ಲರ್ಪೆ, ಜಿಲ್ಲಾ ಸಮಿತಿ ಸದಸ್ಯರಾದ ಅಫ್ರೀದ್ ಹಾಗೂ ಅಫ್ರಾಝ್ ಇದ್ದರು.

See also  ದೆಹಲಿ: ದೇಶದ 11 ರಾಜ್ಯಗಳಲ್ಲಿ 25 ಶಂಕಿತ ಐಎಸ್ ಉಗ್ರರ ಬೇಟೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು