News Kannada
Saturday, March 25 2023

ಮಂಗಳೂರು

ಮಂಗಳೂರು: ವಿವಿಧ ಕಡೆ ಮಹಿಳೆಯರ ಸರ ಸುಲಿಗೆ, ಮೂವರ ಬಂಧನ

Mangaluru: Three arrested for snatching women's chains at various places
Photo Credit : News Kannada

ಮಂಗಳೂರು: ನಗರದ ವಿವಿಧ ಕಡೆ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕುಲಶೇಖರ ಶಕ್ತಿನಗರ ನಿವಾಸಿ ಜಗದೀಶ್ ಶೆಟ್ಟಿ (39), ಉರ್ವಸ್ಟೋರ್ ನಿವಾಸಿ ಸುಜಿತ್ ಶೆಟ್ಟಿ (40), ಪುತ್ತೂರು ಪದವಿನಂಗಡಿ ನಿವಾಸಿ ಸುರೇಶ್ ರೈ (39) ಬಂಧಿತ ಆರೋಪಿಗಳಾಗಿದ್ದಾರೆ.‌

ಆರೋಪಿಗಳಿಂದ ಸುಲಿಗೆ ಮಾಡಿದ್ದ 90 ಗ್ರಾಂ ತೂಕದ ಚಿನ್ನಾಭರಣ, 2 ಸ್ಕೂಟರ್ ಮತ್ತು 3 ಮೊಬೈಲ್ ಫೋನ್ ಸಹಿತ ಒಟ್ಟು 5 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಗಸ್ಟ್‌ನಲ್ಲಿ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2 ಸರ ಸುಲಿಗೆ ಮತ್ತು ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 1 ಸರ ಸುಲಿಗೆ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಆರಂಭಿಸಿದ್ದ ಸಿಸಿಬಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳು ನಗರದ ಕಾರ್ ಸ್ಟ್ರೀಟ್ ಬಳಿ ಚಿನ್ನದ ಸರವನ್ನು ಮಾರಾಟ ಮಾಡಲು ಬಂದಾಗ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ‌.

ಆರೋಪಿಗಳ ಪೈಕಿ ಜಗದೀಶ್ ರಿಕ್ಷಾ ಮತ್ತು ಸುರೇಶ್ ರೈ ಟೆಂಪೋ ಚಾಲಕ ಹಾಗೂ ಸುಜಿತ್ ಶೆಟ್ಟಿ ಪೈನಾನ್ಸ್ ವ್ಯವಹಾರ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ ಸುಜಿತ್ ಶೆಟ್ಟಿ ಮಂಗಳೂರಿನಲ್ಲಿ 2002ರಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ‌.

See also  ಶ್ರೀನಗರ: ಪ್ರವಾಹ ಸಂತ್ರಸ್ತರಿಗೆ ಪರಿಹಾರ ಮಂಜೂರು ಮಾಡಿದ ಪ್ರಧಾನಿಗೆ ಕೃತಜ್ಞತೆ ಸಲ್ಲಿಸಿದ ಎಲ್ ಜಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು