News Kannada
Thursday, March 23 2023

ಮಂಗಳೂರು

ಬೆಳ್ತಂಗಡಿ: ದಿಢೀರ್ ಉಕ್ಕಿದ ಮೃತ್ಯುಂಜಯ ಹಾಗೂ ನೇತ್ರಾವತಿ ನದಿ

Belthangady: Sudden overflowing of rivers
Photo Credit : By Author

ಬೆಳ್ತಂಗಡಿ: 2019 ರ ಸೆಪ್ಟೆಂಬರ್‌ನಲ್ಲಾದ ಭೀಕರ ಪ್ರವಾಹವನ್ನು ನೆನಪಿಸುವಂತೆ ಮಂಗಳವಾರ ಚಾರ್ಮಾಡಿ ಪ್ರದೇಶದಲ್ಲಿ‌ ಹರಿಯುವ ನೀರಿನ ಮಟ್ಟ ಧಿಡೀರ್ ಹೆಚ್ಚಾಗಿ ಆತಂಕ‌ ಹುಟ್ಟಿಸಿದೆ.

ನದಿಗಳು ಹರಿಯುವ ಪರಿಸರದಲ್ಲಿ ಹೆಚ್ಚಿನ ಮಳೆ ಇಲ್ಲದಿದ್ದರೂ ಮೃತ್ಯುಂಜಯ ಹಾಗೂ ನೇತ್ರಾವತಿ ನದಿಗಳ ನೀರು ದಿಢೀರ್ ಏರಿಕೆಯಾದ ವಿದ್ಯಮಾನ ಸಂಜೆ ನಡೆದಿದೆ. ಇದರಿಂದ ನದಿಬದಿಗಳಲ್ಲಿ ವಾಸಿಸುವ ಜನರಲ್ಲಿ ಆತಂಕ ಸೃಷ್ಟಿಯಾಯಿತು.
ದಿಡುಪೆ,ಮಲವಂತಿಗೆ, ಮಿತ್ತಬಾಗಿಲು, ಕಡಿರುದ್ಯಾವರ, ಮುಂಡಾಜೆ,ಕಲ್ಮಂಜ ಮೊದಲಾದ ಗ್ರಾಮಗಳಲ್ಲಿ ಮಳೆ ಇಲ್ಲದಿದ್ದರೂ ಸಂಜೆ 4 ಗಂಟೆ ಬಳಿಕ ನದಿಗಳ ನೀರಿನಲ್ಲಿ ವಿಪರೀತ ಏರಿಕೆ ಕಂಡು ಬಂತು.

ಚಾರ್ಮಾಡಿ ಕಡೆಯಿಂದ ಹರಿಯುವ ಮೃತ್ಯುಂಜಯ ನದಿಯಲ್ಲಿ ಅತ್ಯಧಿಕ ನೀರು ಹರಿದು ಬಂದಿದೆ. ಈ ವರ್ಷ ನದಿ ಅನೇಕ ಬಾರಿ ತುಂಬಿ ಹರಿದಿದ್ದರೂ ಇಷ್ಟೊಂದು ಪ್ರಮಾಣದ ನೀರು ಏರಿಕೆಯಾಗಿರಲಿಲ್ಲ. ಮೃತ್ಯುಂಜಯ ನದಿಯ ಉಗಮ ಸ್ಥಳವಾದ ಬಿದಿರುತಳ, ಚಾರ್ಮಾಡಿ ಮತ್ತು ಘಾಟಿ ಪ್ರದೇಶದಲ್ಲಿ ಸಂಜೆ 3 ಗಂಟೆ ಬಳಿಕ ಸುಮಾರು ಮೂರು ತಾಸು ಕಾಲ ನಿರಂತರ ಸುರಿದ ವಿಪರೀತ ಮಳೆ ಇದಕ್ಕೆ ಕಾರಣವಾಯಿತು. ನದಿ ಬದಿ ಇರುವ ಅನೇಕ ಅಡಕೆ ತೋಟ, ಗದ್ದೆ, ಕಿರು ಸೇತುವೆ, ಕಿಂಡಿ ಅಣೆಕಟ್ಟುಗಳು ಜಲಾವೃತವಾದವು.

ನೇತ್ರಾವತಿ

ದಿಡುಪ ಕಡೆಯಿಂದ ಹರಿಯುವ ನೇತ್ರಾವತಿ ನದಿಯ ಸಂಪರ್ಕ ಹಳ್ಳಗಳಾದ ಕುಕ್ಕಾವಿನ ಏಳೂವರೆ ಹಳ್ಳ ಹಾಗೂ ಕೂಡಬೆಟ್ಟು ಹಳ್ಳಗಳು ಉಕ್ಕಿಹರಿದ ಪರಿಣಾಮ ನೇತ್ರಾವತಿ ನದಿಯ ತಗ್ಗು ಪ್ರದೇಶಗಳಾದ ಕಡಿರುದ್ಯಾವರ,ಕಾನರ್ಪ,ಪರಮುಖ, ನಿಡಿಗಲ್, ಕಾಯರ್ತೋಡಿ ಕುಡೆಂಚಿ ಹಾಗೂ ಮೃತ್ಯುಂಜಯ ಮತ್ತು ನೇತ್ರಾವತಿ ಸಂಗಮ ಸ್ಥಳವಾದ ಪಜಿರಡ್ಕ ಹಾಗೂ ಕೆಳಭಾಗದ ಪರಿಸರಗಳಲ್ಲಿ ನದಿ ನೀರು ಏರಿಕೆ ಕಂಡಿತು. ಈ ಪ್ರದೇಶಗಳ ಅನೇಕರ ಅಡಕೆ ತೋಟಗಳಿಗೆ ನೀರು ನುಗ್ಗಿದೆ.ದಿಡುಪೆ,ಕೊಲ್ಲಿ ಭಾಗದಲ್ಲಿ ನದಿ ಶಾಂತವಾಗಿದ್ದ ಕಾರಣದಿಂದ ಭಾರಿ ಪ್ರವಾಹದ ಸ್ಥಿತಿ ಉಂಟಾಗಿಲ್ಲ. ಏಳೂವರೆ ಹಳ್ಳ ಹಾಗೂ ಕೂಡ ಬಟ್ಟು ಹಳ್ಳಗಳಿಗೆ ಚಾರ್ಮಾಡಿ ಭಾಗದ ಸಂಪರ್ಕ ಇರುವ ಕಾರಣ ನೀರು ಏರಿಕೆಯಾಗಿದೆ. ಸಂಜೆ 7:30ರ ಬಳಿಕ ಎರಡು ನದಿಗಳ ನೀರು ಇಳಿಯ ತೊಡಗಿದುದರಿಂದ ಪರಿಸರದ ಜನರಲ್ಲಿ ಉಂಟಾಗಿದ್ದ ಆತಂಕ ದೂರವಾಯಿತು.

ಎರಡು ನದಿಗಳಲ್ಲಿ ಹಸಿಮರಗಳ ಸಹಿತ ಭಾರಿ ಸಂಖ್ಯೆಯ ಮರಮಟ್ಟು ಕೊಚ್ಚಿಕೊಂಡು ಹೋಗಿದೆ. ಭಾರಿ ಮಣ್ಣು ಮಿಶ್ರಿತ ನೀರು ಕೂಡ ಹರಿದಿದ್ದು ಘಟ್ಟ ಪ್ರದೇಶದಲ್ಲಿ ಗುಡ್ಡ ಕುಸಿತವೇನಾದರೂ ಉಂಟಾಗಿರಬಹುದೇ ಎಂಬ ಸಂಶಯ ಸ್ಥಳೀಯರಲ್ಲಿ ಉಂಟಾಗಿದೆ. 2019 ರಲ್ಲಿ ಎರಡು ನದಿಗಳಲ್ಲಿ ಪ್ರವಾಹ ಬಂದು ಜನಜೀವನ ಅಸ್ತವ್ಯಸ್ತವಾದ ಬಳಿಕ ಈ ನದಿಗಳ ನೀರಿನ ಮಟ್ಟ ಕೊಂಚ ಏರಿಕೆ ಕಂಡರೂ ಪ್ರದೇಶಗಳ ಜನರಲ್ಲಿ ಭೀತಿ ಆವರಿಸುತ್ತದೆ. ಅಡಕೆ ತೋಟಗಳಿಗೆ ನೀರಿನ ಜತೆ ಮರಮಟ್ಟಗಳು ನುಗ್ಗಿದ್ದು ಹಾನಿ ಪ್ರಮಾಣ ಇನ್ನಷ್ಟೇ ತಿಳಿದು ಬರಬೇಕಿದೆ.

See also  ಪುತ್ತೂರು: ಇಬ್ಬರು ಅಂತರ್ ರಾಜ್ಯ ಸರಗಳ್ಳರ ಬಂಧನ, ಎರಡು ಬೈಕ್ ಹಾಗೂ ಚಿನ್ನಾಭರಣ ಪೊಲೀಸರ ವಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು