News Kannada
Tuesday, December 12 2023
ಮಂಗಳೂರು

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

Restaurant manager shot dead in Hyderabad
Photo Credit : Pixabay

ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಹರಿಯುವ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಬುಧವಾರ ಪತ್ತೆಯಾಗಿದೆ.

ನದಿ ಮಧ್ಯಭಾಗದಲ್ಲಿ ಸಿಲುಕಿಕೊಂಡಿದ್ದ ತ್ಯಾಜ್ಯಗಳ ಮಧ್ಯೆ ಮೃತದೇಹ ಕಂಡುಬಂದಿತ್ತು. ಧರ್ಮಸ್ಥಳ ಠಾಣೆಯ ಪೊಲೀಸರು,ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಕಾರದಲ್ಲಿ ಶವವನ್ನು ಮೇಲಕ್ಕೆತ್ತಿದ್ದಾರೆ. ನದಿಯಲ್ಲಿ ಮಂಗಳವಾರ ಸಂಜೆ ಭಾರಿ ಪ್ರಮಾಣದ ನೀರು ಹರಿದಿದ್ದು ಈ ವೇಳೆ ಮೇಲ್ಭಾಗದಿಂದ ಕೊಚ್ಚಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮಹಿಳೆಯ ಮೃತದೇಹದ ಗುರುತು ಪತ್ತೆಹಚ್ಚಲಾಗದ ಸ್ಥಿತಿಯಲ್ಲಿದ್ದು,ಕೈಯಲ್ಲಿ ಬೆಳ್ಳಿಯ ಬಳೆ ಹಾಗೂ ಕಿವಿಯಲ್ಲಿ ಚಿನ್ನವನ್ನು ಹೋಲುವ ಕಿವಿಯೋಲೆಗಳಿವೆ. ಧರ್ಮಸ್ಥಳ ಠಾಣೆಯ ಪಿಎಸ್ ಐ ಅನಿಲ್ ಕುಮಾರ್ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸುದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬೆಳಾಲು ಶೌರ್ಯ ತಂಡದ ಸ್ವಯಂ ಸೇವಕರಾದ ಮುಳುಗು ತಜ್ಞ ಹರೀಶ್ ಬೆಳಾಲು, ಸಂಯೋಜಕಿ ಆಶಾ, ರವೀಂದ್ರ,ಹರೀಶ್ ಮಂಜುನಾಥ್, ಜಯರಾಮ್, ವೇಣೂರು, ರಾಘವೇಂದ್ರ,ಹರೀಶ್, ಸಂಜೀವ, ಯಶೋಧರ, ಸಂತೋಷ್ ಕೆ. ಜಗದೀಶ್ ಮೃತದೇಹ ಮೇಲೆತ್ತಲು ಸಹಕರಿಸಿದರು.

See also  ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಲುವಾಗಿ ಸಂಭ್ರಮದ ನಡಿಗೆ ಕಾಯ೯ಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು