News Kannada
Saturday, April 01 2023

ಮಂಗಳೂರು

ಬೆಳ್ತಂಗಡಿ: ದಾಖಲೆ ದುರುಪಯೋಗ ಪ್ರಕರಣದ ಆರೋಪದಲ್ಲಿ ಗ್ರಾಮ ಕರಣಿಕನ ಬಂಧನ

Village Karnika arrested
Photo Credit : By Author

ಬೆಳ್ತಂಗಡಿ: ಕಂದಾಯ ಇಲಾಖೆಯ ದಾಖಲೆ ದುರುಪಯೋಗ ಪ್ರಕರಣದ ಆರೋಪದಲ್ಲಿ ಗ್ರಾಮ ಕರಣಿಕರೋರ್ವರನ್ನು ಬಂಧಿಸಿದ ಘಟನೆ ಸೆ.೭ರಂದು ವರದಿಯಾಗಿದೆ.

ಬೆಳ್ತಂಗಡಿ ಹೋಬಳಿ ವ್ಯಾಪ್ತಿಗೆ ಒಳಪಟ್ಟ ತಣ್ಣೀರುಪಂತ, ಪುತ್ತಿಲ, ಬಾರ್ಯ, ಕರಾಯ ಗ್ರಾಮದ ಗ್ರಾಮಕರಣಿಕರಾದ ಜಯಚಂದ್ರ ಅವರು ಬಂಧನಕೊಳಗಾಗಿದ್ದು, ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ೨೦೧೮ರಲ್ಲಿ ಕೊಕ್ಕಡ ಹೋಬಳಿಯ ಎನ್‌ಸಿಆರ್ ಪೈಲ್‌ಗಳ ಕೇಸ್ ವರ್ಕರ್ ಆಗಿದ್ದ ಜಯಚಂದ್ರ ಪಿ.ಎನ್, ಇನ್ನೋರ್ವ ಆರೋಪಿ ರಾಜು ಎಂಬಾತನೊಂದಿಗೆ ಸೇರಿ ಅಕ್ರಮ ಲಾಭಗಳಿಸುವ ಉದ್ದೇಶದಿಂದ ಸರಕಾರಿ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸದೆ ತಾಲೂಕು ಕಚೇರಿಗೆ ಸಾರ್ವಜನಿಕರಿಂದ ಬಂದ ಎನ್‌ಸಿಆರ್ ಪೈಲ್‌ಗನ್ನು ರಾಜು ವಶಕ್ಕೆ ನೀಡಿ, ಆ ಪೈಲ್‌ಗಳನ್ನು ಅಪ್ರಮಾಣಿಕವಾಗಿ ತನ್ನ ವಶದಲ್ಲಿ ಬಚ್ಚಿಟ್ಟದನ್ನು ರಾಜು ತಾಲೂಕು ಕಚೇರಿಗೆ ನೀಡಿ ಆರೋಪಿಗಳು ವಂಚನೆ ಹಾಗೂ ನಂಬಿಕೆಗೆ ದ್ರೋಹ ಎಸಗಿರುವ ಬಗ್ಗೆ ಆ.೧೬ರಂದು ಬೆಳ್ತಂಗಡಿ ತಹಶೀಲ್ದಾರ್ ಪ್ರಥ್ವಿ ಸಾನಿಕಂ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು.

ಸೆ.೭ರಂದು ಜಯಚಂದ್ರ ಅವರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

See also  ಪಂಜಾಬ್: ನಾಳೆ ಚಂಡೀಗಢದ ನಿವಾಸದಲ್ಲಿ ಸಪ್ತಪದಿ ತುಳಿಯಲಿದ್ದಾರೆ ಮುಖ್ಯಮಂತ್ರಿ ಭಗವಂತ್​ ಮಾನ್!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು