News Kannada
Thursday, March 23 2023

ಮಂಗಳೂರು

ಬಂಟ್ವಾಳ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕುಡಿಯುವ ನೀರಿನ ಶುದ್ಧೀಕರಣ ಯಂತ್ರ ಹಸ್ತಾಂತರ

Bantwal: Drinking water purification machine handed over to Government Higher Primary School
Photo Credit : By Author

ಬಂಟ್ವಾಳ: ಸರ್ಕಾರದ ಜೊತೆಗೆ ಮಕ್ಕಳ ಪೋಷಕರು ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸರ್ಕಾರಿ ಶಾಲೆ ಬೆಳವಣಿಗೆ ಕಾಣಲು ಸಾಧ್ಯವಿದೆ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ತಾರಕೇಶ್ವರಿ ಹೇಳಿದ್ದಾರೆ.

ಇಲ್ಲಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಸಿದ್ಧಕಟ್ಟೆ ಸಮೀಪದ ಆರಂಬೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಕುಡಿಯುವ ನೀರಿನ ಶುದ್ಧೀಕರಣ ಯಂತ್ರ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕ್ಲಬ್ಬಿನ ಅಧ್ಯಕ್ಷೆ ಶೃತಿ ಮಾಡ್ತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ವೇಳೆ ಕ್ಲಬ್ಬಿನ ಕೋಶಾಧಿಕಾರಿ ಕಿರಣ್ ಕುಮಾರ್ ಮಂಜಿಲ ಮತ್ತು ಬೇಬಿ ಕೆ.ಮಂಜಿಲ ದಂಪತಿ ತನ್ನ ಪುತ್ರಿ ನಿಯಾ ಇವರ 3ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ರೂ 65ಸಾವಿರ ವೆಚ್ಚದ ಕುಡಿಯುವ ನೀರಿನ ಶುದ್ಧೀಕರಣ ಯಂತ್ರ ಹಸ್ತಾಂತರಿಸಿದರು. ಪೂಂಜ ಕ್ಷೇತ್ರದ ಅಸ್ರಣ್ಣ ಕೃಷ್ಣಪ್ರಸಾದ್ ಆಚಾರ್ಯ, ಕ್ಲಬ್ಬಿನ ವಲಯ ಸೇನಾನಿ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಕಾರ್ಯದರ್ಶಿ ವಿಜಯ ಫೆನಾಂಡಿಸ್, ಸದಸ್ಯ ಹರಿಪ್ರಸಾದ್ ಶೆಟ್ಟಿ ಕುರುಡಾಡಿ ಶುಭ ಹಾರೈಸಿದರು.

ಆರಂಬೋಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಭಾಕರ ಹುಲಿಮೇರು, ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ಅಧ್ಯಕ್ಷ ಗಣೇಶ ಶೆಟ್ಟಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಹಾಸ ಎಂ., ಸದಸ್ಯ ಉಮೇಶ ಶೆಟ್ಟಿ ಮತ್ತಿತರರು ಇದ್ದರು. ಮುಖ್ಯಶಿಕ್ಷಕಿ ಸುಶೀಲ ಸ್ವಾಗತಿಸಿ, ಶಿಕ್ಷಕಿ ವಿಜಯಲಕ್ಷ್ಮೀ ವಂದಿಸಿದರು.

See also  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 667 ಮಂದಿಗೆ ಕೊರೋನಾ ಪಾಸಿಟಿವ್, 4 ಸೋಂಕಿತರ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು