News Kannada
Friday, September 29 2023
ಮಂಗಳೂರು

ಬೆಳ್ತಂಗಡಿ: ಸೆ.15 ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ಇಂಜಿನಿಯರ್ಸ್ ಡೇ ಆಚರಣೆ

Belthangady: Engineers' Day will be celebrated at Krishnanugraha Auditorium in Ujire on September 15.
Photo Credit : By Author

ಬೆಳ್ತಂಗಡಿ: ಅಖಿಲ ಭಾರತ ಸಿವಿಲ್ ಇಂಜಿನಿಯರ್‌ಗಳ ಸಂಘ ಎ.ಸಿ.ಸಿ.ಇ.(ಐ) ಬೆಳ್ತಂಗಡಿ ಕೇಂದ್ರದ ವತಿಯಿಂದ ಸರ್.ಎಂ.ವಿಶ್ವೇಶ್ವರಯ್ಯ ಅವರ 162 ನೇ ಜಯಂತಿ ಪ್ರಯುಕ್ತ ಸೆ.15 ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ರೋಟರಿ ಕ್ಲಬ್ ಜೊತೆಯಲ್ಲಿ ಇಂಜಿನಿಯರ್ಸ್ ಡೇ ಆಚರಿಸಲಾಗುವುದು ಎಂದು ಸಂಘದ ಚೇರ್‌ಮನ್ ಜಗದೀಶ ಪ್ರಸಾದ್ ಎನ್.ತಿಳಿಸಿದರು.

ಇಲ್ಲಿನ ಪತ್ರಿಕಾಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ವಿವರ ನೀಡಿದರು. ಅಪರಾಹ್ನ 3 ಗಂಟೆಗೆ ಬೆಳ್ತಂಗಡಿ ಹಳೆಕೋಟೆಯಿಂದ ಉಜಿರೆವರೆಗೆ ವಾಹನ ಜಾಥಾ ಹಮ್ಮಿಕೊಳ್ಳಲಾಗಿದೆ. ಕೃಷ್ಣಾನುಗ್ರಹ ಸಭಾಭವನದಲ್ಲಿ ಸಂಜೆ 5 ರಿಂದ ಕೇಂದ್ರದ ಸದಸ್ಯರಿಗೆ ತಾಂತ್ರಿಕ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ತಿಳಿಸಿದರು. ಬಳಿಕ ಬೆಳ್ತಂಗಡಿ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ತಾಲೂಕಿನ ಇಬ್ಬರು ಹಿರಿಯ ಇಂಜಿನಿಯರ್‌ಗಳಾದ ನಾರಾಯಣ ಭಟ್ ಮತ್ತು ಸೀತಾರಾಮ ಶೆಟ್ಟಿ ಬಿ. ಅವರನ್ನು ಗೌರವಿಸಲಾಗುವುದು. ನಂತರ ಭರತ ನೃತ್ಯ ಪ್ರದರ್ಶನಗೊಳ್ಳಲಿದೆ ಎಂದರು.

ರೋಟರಿ ಕ್ಲಬ್ ಅಧ್ಯಕ್ಷೆ ಮನೋರಮಾ ಭಟ್, ಕಾರ್ಯದರ್ಶಿ ರಕ್ಷಾ ರಾಘ್ನೇಶ್, ಎ.ಸಿ.ಸಿ.ಇ(ಐ) ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು, ಕೋಶಾಧಿಕಾರಿ ಸುರೇಶ್ ಬಂಗೇರ ಇದ್ದರು.

See also  ಬೆಳ್ತಂಗಡಿ: ಬೆಳಾಲು ಗ್ರಾಮದ ಅಮುಂಜಿ ಸಮಿತಿ ಹೊಳೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು