News Kannada
Friday, September 22 2023
ಮಂಗಳೂರು

ಮಂಗಳೂರು: ಮೂಡಬಿದಿರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿ ದರೋಡೆ, ಮೂವರ ಬಂಧನ

MOODBIDRE
Photo Credit : News Kannada

ಮಂಗಳೂರು: ಮೂಡುಬಿದಿರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೂಡಬಿದ್ರೆಯ ಬಡಗಮಿಜಾರು ಗ್ರಾಮದ ನಿವಾಸಿ ದಿನೇಶ್ ಪೂಜಾರಿ , ಬೆಳ್ತಂಗಡಿ ತಾಲ್ಲೂಕಿನ ಉಳ್ಳ ಗುಡ್ಡೆ ಹೊಸಮನಿ ನಿವಾಸಿ ಸುಕೇಶ್ ಪೂಜಾರಿ , ಮೂಡಬಿದಿರೆಯ ನಿರ್ಮಾಣದ ಡಕ್ಕೆ ನಿವಾಸಿ ಹರೀಶ್ ಪೂಜಾರಿ ಬಂಧಿತ ಆರೋಪಿಗಳು.

ವರದಿಯ ಪ್ರಕಾರ ಆಗಸ್ಟ್ ಮೂವತ್ತ ರಂದು ಮಂಗಳವಾರ ರಾತ್ರಿ ಹತ್ತು ಮೂವತ್ತು ರ ಸುಮಾರಿಗೆ ಈ ಮೂವರು ಮೂಡಬಿದಿರೆಯ ಅಶ್ವತ್ಥಪುರದ ಬೇರಿಂಜೆ ಗುಡ್ಡೆ ನಿವಾಸಿ ಕಮಲಾ ಎಂಬ ಒಂಟಿ ಮಹಿಳೆಯ ಮನೆಗೆ ನುಗ್ಗಿದ್ದರು. ಕಮಲ ಅವರ ಮೇಲೆ ಮಚ್ಚಿನಿಂದ ದೈಹಿಕ ಹಲ್ಲೆ ನಡೆಸಿ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು ಈ ಕುರಿತು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳ್ಳತನ ಮಾಡಿದ ಚಿನ್ನಾಭರಣಗಳನ್ನು ದುಷ್ಕರ್ಮಿಗಳು ಮಂಗಳೂರಿಗೆ ತೆರಳುತ್ತಿದ್ದಾಗ ಕುಲಶೇಖರ ಚರ್ಚ್ ಗೇಟ್ ಬಳಿ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಸುಮಾರು 4ಪಾಯಿಂಟ್ 5ಲಕ್ಷ ರೂ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳವು ಮಾಡಿದ ಆಭರಣಗಳು 2ಸ್ಕೂಟರ್ ಗಳು 3ಮೊಬೈಲ್ ಗಳನ್ನು 1ಮಚ್ಚು 2ಮಂಕಿ ಕ್ಯಾಪ್ ಗಳನ್ನು ವಶಕ್ಕೆ ಪಡೆದಿದ್ದಾರೆ.

See also  ಬೆಳ್ತಂಗಡಿ: ಶ್ರೀ ಕೃಷ್ಣ ಯೋಗಕ್ಷೇಮ "ರೀಚಿಂಗ್ ದಿ ಅನ್ರೀಚ್" ವೈದ್ಯಕೀಯ ಸೇವೆ ಪ್ರಾರಂಭ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು