News Kannada
Saturday, September 23 2023
ಮಂಗಳೂರು

ಮಂಗಳೂರು: ಅಕ್ರಮ ಮರಳು ಸಾಗಾಟ, ಆರೋಪಿಗಳ ಬಂಧನ

Illegal sand smuggling case: Accused arrested
Photo Credit : News Kannada

ಮಂಗಳೂರು:  ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ 7ಮಂದಿ ಆರೋಪಿಗಳನ್ನು ಬಂಧಿಸಿ ಮರಳು ಸಾಗಾಟದ ಲಾರಿಯನ್ನು ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಬಳಿ ನಡೆದಿದೆ.

ತಲಪಾಡಿ ನಿವಾಸಿ ರಿಯಾಜ್, ಕೆ ಸಿ ರೋಡ್ ನಿವಾಸಿ ಅಬೂಬಕರ್, ಸೋಮೇಶ್ವರ ಗ್ರಾಮ ನಿವಾಸಿ ರಘುನಾಥ, ತಲಪಾಡಿ ಚೆಕ್ ಪೋಸ್ಟ್ ನಿವಾಸಿ ರಾಜೇಶ್, ಕುದ್ರು ನಿವಾಸಿಗಳಾದ ಅತುಲ್, ರಾಮಧಾರಿ ಮತ್ತು ಪಂಕಜ್ ಬಂಧಿತ ಆರೋಪಿಗಳು.

ಬಂಧಿತರು ತಲಪಾಡಿ ಕುದ್ರು ಗಡಿಯಿಂದ ಅಕ್ರಮವಾಗಿ ಮರಳು ಸಂಗ್ರಹ ಮಾಡಿ ಅದನ್ನು ಲಾರಿಗೆ ಲೋಡ್ ಮಾಡಿ ದ ಬಳಿಕ ತೆಂಗಿನ ಗರಿಯಿಂದ ಮುಚ್ಚಿ ಕೇರಳ ಕಡೆ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

See also  ಹೈದರಾಬಾದ್: ವಿಜಯ್ ದೇವರಕೊಂಡ ಅಭಿನಯದ 'ಲೈಗರ್' ಚಿತ್ರಕ್ಕೆ ಯುಎ ಸರ್ಟಿಫಿಕೇಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು