News Kannada
Sunday, December 10 2023
ಮಂಗಳೂರು

ಮಂಗಳೂರು: ಪಣಂಬೂರು ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ

Cleanliness drive at Panambur beach
Photo Credit : R Bhat

ಮಂಗಳೂರು: ಸ್ವಚ್ಛ ಅಮೃತ ಮಹೋತ್ಸವದ ಅಂಗವಾಗಿ ಸ್ವಚ್ಛ ಸಾಗರ ಸುರಕ್ಷಿತ ಸಾಗರ ಧ್ಯೇಯವಾಕ್ಯದೊಂದಿಗೆ ಪಣಂಬೂರು ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

ನೂರಾರು ಸ್ವಯಂಸೇವಕರು ಕಡಲ ಕಿನಾರೆಯನ್ನು ಸ್ವಚ್ಚಗೊಳಿಸಿದರು, ಬೆಳಿಗ್ಗೆ 7ಗಂಟೆಗೆ ಆರಂಭವಾದ ಈ ಸ್ವಚ್ಚತಾ ಕಾರ್ಯದಲ್ಲಿ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ, ಸ್ವಯಂ ಸೇವಕರು, ಕರಾವಳಿ ರಕ್ಷಣಾ ದಳ, ಎನ್ ಪಿಎ ಅಧಿಕಾರಿಗಳು ಭಾಗವಹಿಸಿದ್ದರು.

ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಕೇಂದ್ರ ಸರಕಾರದ ಭೂ ವಿಜ್ಞಾನ ಸಚಿವಾಲಯ ಹಾಗೂ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ, ಕರಾವಳಿ ರಕ್ಷಣಾ ಪ್ರಾಧಿಕಾರದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರಿನ ಮೇಯರ್ ಜಯಾನಂದ ಅಂಚನ್, ಶಾಸಕ ವೈ ಭರತ್ ಶೆಟ್ಟಿ, ಉಪಮೇಯರ್ ಪೂರ್ಣಿಮಾ ಜಿಲ್ಲಾಧಿಕಾರಿ ರಾಜೇಂದ್ರ ಕೆ ವಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಭಾಗವಹಿಸಿದರು.

See also  ಕಾಂಗ್ರೆಸ್‌ ಪಕ್ಷ ಕರಾವಳಿಗೆ ಪ್ರತ್ಯೇಕ ಚುನಾವಣ ಪ್ರಣಾಳಿಕೆ ಸಿದ್ಧಪಡಿಸಲಿದೆ: ಡಿಕೆಶಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು