News Kannada
Saturday, April 01 2023

ಮಂಗಳೂರು

ಬೆಳ್ತಂಗಡಿ: ತಾಲೂಕು ಆಡಳಿತ ವತಿಯಿಂದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ

Belthangady: Vishwakarma Jayanthi programme organised by taluk administration
Photo Credit : By Author

ಬೆಳ್ತಂಗಡಿ: ಭಾರತದ ಕುಶಲ ಕಲೆಗೆ ಶಕ್ತಿಯನ್ನು ತುಂಬಿದವರು ವಿಶ್ವಕರ್ಮ ಸಮುದಾಯದವರು ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು.

ಅವರು ಶನಿವಾರ ತಾಲೂಕು ಆಡಳಿತ ವತಿಯಿಂದ ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಲೆ ಸಂಸ್ಕೃತಿಗೆ ಹೆಸರುವಾಸಿಯಾದ ದೇಶ ಭಾರತದ ಇದಕ್ಕೆ ಮೂಲ ಕೊಡುಗೆ ವಿಶ್ವಕರ್ಮ ಸಮುದಾಯದವರದ್ದು.ತಾಲೂಕಿನ ವಿಶ್ವಕರ್ಮ ಸಮುದಾಯ ಭವನಕ್ಕೆ 55ಲಕ್ಷ ರೂಗಳನ್ನು ನೀಡಿದ್ದು ಮುಂದಿನ ವರ್ಷದಿಂದ ತಾಲೂಕು ಮಟ್ಟದ ವಿಶ್ವಕರ್ಮ ದಿನಾಚರಣೆಯನ್ನು ಲಾಯಿಲದ ವಿಶ್ವಕರ್ಮ ಸಭಾ ಭವನದಲ್ಲಿ ಅಚರಿಸಲಾಗುವುದು ಎಂದರು.

ವಿಶ್ವಕರ್ಮ ಸಂಘದ ಮಾಜಿ ಅದ್ಯಕ್ಷ ಸತೀಶ್ ಅಚಾರ್ಯ ಮಾತನಾಡಿ ವಿಶ್ವಕರ್ಮ ಸಮಾಜಕ್ಜೆ ಇದುವರೆಗೆ ಯಾರೂ ನೀಡದ ಸಹಕಾರವನ್ನು ಶಾಸಕ ಹರೀಶ್ ಪೂಂಜಾ ನೀಡಿದ್ದಾರೆ. ನಮ್ಮ ಸುಮುದಾಯ ಭವನಕ್ಕೆ 55 ಲಕ್ಷ ರೂಗಳನ್ನು ನೀಡುವ ಮೂಲಕ ನಮಗೆ ಶಕ್ತಿ ತುಂಬಿದ್ದಾರೆ. ಅಲ್ಲದೆ ನಮ್ಮ ಸಮುದಾಯದ ಅನೇಕ ಮಂದಿಗೆ ವಿವಿಧ ಕ್ಷೇತ್ರದಲ್ಲಿ ಅವಕಾಶ ನೀಡಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಉಪತಹಸೀಲ್ದಾರ್ ರವಿ ಕುಮಾರ್ ಮಾತನಾಡಿ ವಿಶ್ವಕರ್ಮ ಸಮುದಾಯ ದೇವ ಶಿಲ್ಪಿಗಳು ಎಂದರು. ಪ್ರಥಮ ದರ್ಜೆ ಸಹಾಯಕಿ ಹೇಮಾ ಸ್ವಾಗತಿಸಿದರು, ಪ್ರಥಮ ದರ್ಜೆ ಸಹಾಯಕ ಮೃತ್ಯುಂಜಯ ನಿರೂಪಿಸಿ ಪ್ರಥಮ ದರ್ಜೆ ಸಹಾಯಕಿ ಅನಿತಾ ವಂದಿಸಿದರು.

See also  ಆಳ್ವಾಸ್ ವಿದ್ಯಾರ್ಥಿಗಳಿಂದ ಬೀಚ್ ಸ್ವಚ್ಛತಾ ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು