News Kannada
Monday, December 11 2023
ಮಂಗಳೂರು

ಬಂಟ್ವಾಳ: ಪಿ.ಎಫ್.ಐ ವಿರುದ್ಧ ಕಾರ್ಯಚರಣೆ ನಡೆಸುತ್ತಿರುವ ಪೊಲೀಸ್ ಕಾರ್ಯ ಶ್ಲಾಘನೀಯ

Bantwal: The police action against the PFI is commendable.
Photo Credit : By Author

ಬಂಟ್ವಾಳ: ಹಿಂಸೆಯ ಮುಖಾಂತರವೇ ವ್ಯವಸ್ಥೆಯನ್ನು ಬುಡಮೇಲು ಗೊಳಿಸುವ ಪಿ.ಎಫ್.ಐ ಸಂಘಟನೆಯನ್ನು ಹತ್ತಿಕ್ಕಲು ಬಿಜೆಪಿ ಸರಕಾರ ಬದ್ದವಾಗಿದ್ದು, ಈ ಕುರಿತು ಕಾರ್ಯ ಚರಣೆ ನಡೆಸುತ್ತಿರುವ ಪೊಲೀಸ್ ಕಾರ್ಯ ಶ್ಲಾಘನೀಯ, ಅವರ ಕಾರ್ಯ ಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು.

ಅವರು ಬಿಸಿರೋಡಿನಲ್ಲಿ ಮಾಧ್ಯಮದವರ ಮಾತನಾಡುತ್ತಾ,ಸಮಾಜ ಘಾತುಕ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ‌ ಇಲ್ಲದಿರುವವರ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ‌ಕೈಗೊಳ್ಳುತ್ತಿದೆ ಎಂದರು. ಕಾಂಗ್ರೇಸ್ ಅಧಿಕಾರವಧಿಯಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತರ ಹತ್ಯೆಯಲ್ಲಿ ಹಾಗೂ ಇತ್ತೀಚೆಗೆ ಶಿವಮೊಗ್ಗ ಹಾಗೂ ‌ಪುತ್ತೂರುನಲ್ಲಿ ನಡೆದಿದ್ದ ಕೊಲೆ ಕೃತ್ಯದಲ್ಲಿ ಪಿಎಫ್ ಐ ಸಂಘಟನೆಯ ಕೈವಾಡ ಇರುವುದು ತನಿಖೆಯಲ್ಲಿ ತಿಳಿದು ಬಂದಿದೆ, ಹೀಗಾಗಿ ಅವರ ವಿರುದ್ಧ ಎನ್ ಐ ಎ ಹಾಗೂ ಪೊಲೀಸರು ಕ್ರಮ‌ಕೈಗೊಂಡಿದ್ದಾರೆ, ಸಮಾಜ ದ್ರೋಹಿಗಳಿಗೆ ವಿಜೃಂಭಿಸಲು ಬಿಜೆಪಿ ಸರ್ಕಾರ ಅವಕಾಶ ನೀಡುವುದಿಲ್ಲ, ಸಿದ್ಧರಾಮಯ್ಯ ವಿಜೃಂಭಿಸಲು ಅವಕಾಶ ಕೊಟ್ಟಿದ್ದರು.

ಶಂಕಿತ ಉಗ್ರನಿಂದ ಬಂಟ್ವಾಳದಲ್ಲಿ ಬಾಂಬ್ ರಿಹರ್ಸಲ್‌ ನಡೆದಿರುವ ವಿಚಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಂತರ್ರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಿರುವ ಇಂತಹಾ ಕೃತ್ಯಗಳನ್ನು ಎಎನ್ಐ ಹಾಗೂ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದರು. ಬಿಜೆಪಿ‌ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ, ಹಿಂದುಳಿದ‌ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ್ ಉಪಸ್ಥಿತರಿದ್ದರು.

See also  ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಕಚೇರಿ ಉದ್ಘಾಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು