News Kannada
Thursday, September 28 2023
ಮಂಗಳೂರು

ಸುರತ್ಕಲ್: ಐತಿಹಾಸಿಕ ಟೋಲ್ ತೆರವು ಹೋರಾಟದ ಸಿದ್ದತೆಗೆ ಮಂಗಳೂರು ನಗರ ಮಟ್ಟದ ಯಶಸ್ವಿ ಸಭೆ

SURATHKAL
Photo Credit : By Author

ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗಾಗಿ ಅಕ್ಟೋಬರ್ 18ರಂದು ನೇರ ಕಾರ್ಯಾಚರಣೆ ಟೋಲ್ ಗೇಟ್ ಮುತ್ತಿಗೆ ಕಾರ್ಯಕ್ರಮದ ತಯಾರಿಗಾಗಿ ಮಂಗಳೂರು ನಗರ ಮಟ್ಟದ ಸಮಾನ ಮನಸ್ಕ ಸಂಘಟನೆಗಳ ಸಿದ್ದತಾ ಸಭೆಯು ಇಂದು ( 01-10-2022) ನಗರದ ವುಡ್ ಲ್ಯಾಂಡ್ ಹೋಟೇಲ್ ನಲ್ಲಿ ನಡೆಯಿತು.

ತಾತ್ಕಾಲಿಕ ಅವಧಿಗೆ ಆರಂಭಗೊಂಡ ಸುರತ್ಕಲ್ ಟೋಲ್ ಗೇಟ್ ಜನರ ಪ್ರಬಲ ವಿರೋಧದ ಹೊರತಾಗಿಯೂ ಏಳು ವರುಷ ಅಕ್ರಮವಾಗಿ ಪೂರೈಸಿದೆ. ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ನಿರಂತರ ಹೋರಾಟ ನಡೆದು ಇತ್ತೀಚೆಗೆ ಸಪ್ಟೆಂಬರ್ ತಿಂಗಳಲ್ಲಿ ನಡೆದ ಸಾಮೂಹಿಕ ಧರಣಿಯ ಸಂದರ್ಭ ಸ್ವತಃ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಕೆಲವೇ ದಿನಗಳಲ್ಲಿ ಸುರತ್ಕಲ್ ಟೋಲ್ ತೆರವುಗೊಳ್ಳಲಿದೆ ಎಂದು ತಿಳಿಸಿದರೂ.

ಈ ಬಗ್ಗೆ ಯಾವುದೇ ಬೆಳವಣೆಗೆಗಳು ಕಾಣದೆ ತೆರವು ಪ್ರಕ್ರಿಯೆ ಹಳೆಯ ಅನುಭವದಂತೆ ಚಲಿಸದೆ ನಿಂತಿದೆ. ಈ ಹಿನ್ನಲೆಯಲ್ಲಿ ಹೋರಾಟ ಸಮಿತಿಯ ತೀರ್ಮಾನದಂತೆ ಅಕ್ಟೋಬರ್ 18ರಂದು ನೇರ ಕಾರ್ಯಾಚರಣೆ, ಟೋಲ್ ಗೇಟ್ ಮುತ್ತಿಗೆ ಯಶಸ್ವಿಗೊಳಿಸಲು ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಸಮಾನ ಮನಸ್ಕ ಸಂಘಟನೆಗಳು ಒಮ್ಮತದ ತೀರ್ಮಾನವನ್ನು ಕೈಗೊಂಡಿದೆ.

ಇನ್ನು ಪ್ರಚಾರದ ಭಾಗವಾಗಿ ನಗರದ ವಿವಿಧ ಭಾಗದ ಪ್ರದೇಶ ಮಟ್ಟದಲ್ಲಿ ಸಭೆಗಳನ್ನು ನಡೆಸುವುದು, ವ್ಯಾಪಕ ಕರಪತ್ರಗಳನ್ನು ಹಂಚುವುದು, ಸ್ಥಳೀಯ ಸಂಘ ಸಂಸ್ಥೆಗಳ, ಯುವಕ ಮಂಡಲಗಳು ಕಾರ್ಯಕ್ರಮಕ್ಕೆ ಬೆಂಬಲಿಸಿ ಭಾಗವಹಿಸುವಂತೆ ಪ್ರೇರೇಪಿಸುವುದು ಹಾಗೂ ಇದೇ ಬರುವ ಅಕ್ಟೋಬರ್ 10ರಂದು ಮಂಗಳೂರು ನಗರದ ಪ್ರಮುಖ ಬೀದಿಗಳಲ್ಲಿ ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳುವ ತೀರ್ಮಾನವನ್ನು ಕೈಗೊಳ್ಳಲಾಯಿತು.

ಸಭೆಯಲ್ಲಿ ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ಕಾರ್ಯಕ್ರಮದ ರೂಪುರೇಷೆಯ ಕುರಿತು ಮಾತನಾಡಿದರು.

ಸಾಮಾಜಿಕ ಹೋರಾಟಗಾರ ಎಂಜಿ ಹೆಗಡೆ, ಜನಪರ ಚಿಂತಕರಾದ ರೋಯ್ ಕ್ಯಾಸ್ಟಲಿನೋ, ಹಿರಿಯ ವಕೀಲರಾದ ಯಶವಂತ ಮರೋಳಿ, ರಾಮಚಂದ್ರ. ಬಿ, ಕಾರ್ಪೊರೇಟರ್ ಲತೀಫ್ ಕಂದುಕ, ಮಾಜಿ ಕಾರ್ಪೊರೇಟರ್ ಗಳಾದ ಪ್ರಕಾಶ್ ಸಾಲ್ಯಾನ್, ದಯಾನಂದ ಶೆಟ್ಟಿ, ಅಝೀಝ್ ಕುದ್ರೋಳಿ, ಜಯಂತಿ ಬಿ ಶೆಟ್ಟಿ , ಸಿಪಿಐ ಜಿಲ್ಲಾ ನಾಯಕರಾದ ಬಿ ಶೇಖರ್, ವಿ.ಕುಕ್ಯಾನ್, ಸೀತಾರಾಮ ಬೇರಿಂಜ, ಕರುಣಾಕರ್, ಪುಷ್ಪಾ ರಾಜ್ ಬೋಳೂರು, CPIM ಮುಖಂಡರಾದ ಸುನಿಲ್ ಕುಮಾರ್ ಬಜಾಲ್, ಡಾ.ಕ್ರಷ್ಣಪ್ಪ ಕೊಂಚಾಡಿ, ಜೆಡಿಎಸ್ ಮುಖಂಡರಾದ ಸುಮತಿ ಎಸ್ ಹೆಗ್ಡೆ, ಅಲ್ತಾಫ್ ತುಂಬೆ, ಡಿವೈಎಫ್ಐ ಮುಖಂಡರಾದ ಬಿ.ಕೆ.ಇಮ್ತಿಯಾಜ್, ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ನೌಷಾದ್ ಬೆಂಗರೆ, ಯುವ ವಕೀಲರಾದ ನಿತಿನ್ ಕುತ್ತಾರ್, ಚರಣ್ ಶೆಟ್ಟಿ, ಸುನಂದಾ ಕೆ, ಸಾಮಾಜಿಕ ಚಿಂತಕರಾದ ಅಸುಂತ ಡಿಸೋಜ, ಪ್ರಮೀಳಾ ದೇವಾಡಿಗ, ಮಹಿಳಾ ಮುಖಂಡರಾದ ಭಾರತಿ ಬೋಳಾರ, ಪ್ರಮೀಳಾ ಶಕ್ತಿನಗರ, ಕಾರ್ಮಿಕ ನಾಯಕರಾದ ಯೋಗೀಶ್ ಜಪ್ಪಿನಮೊಗರು, ವಿಲ್ಲಿ ವಿಲ್ಸನ್, ಟೆಂಪೋ ಚಾಲಕ ರ ಸಂಘದ ನಾಯಕರಾದ ಸಿರಾಜ್, ರಾಣಿ ಅಬ್ಬಕ್ಕ ಬಸ್ ನೌಕರರರ ಸಂಘದ ನಾಯಕರಾದ ಜಗದೀಶ್, ಪಲ್ಘುಣಿ ಮೀನುಗಾರರ ಸಂಘದ ಮುಖಂಡರಾದ ತಯ್ಯುಬ್ ಬೆಂಗರೆ , ಟ್ಯಾಕ್ಸಿ ಚಾಲಕರ ಸಂಘದ ಶ್ರೀನಿವಾಸ್ , ಫಯಾಝ್ ಅಮ್ಮೆಂಬಳ ಮುಂತಾದವರು ಭಾಗವಹಿಸಿದ್ದರು. ಸಭೆಯ ಅಧ್ಯಕ್ಷತೆಯನ್ನು ಮಾಜಿ ಮೇಯರ್ ಮುಹಮ್ಮದ್ ಕುಂಜತ್ತಬೈಲ್ ವಹಿಸಿದ್ದರು.

See also  ಅಮ್ರೋಹಾ: 18 ತಿಂಗಳ ಮಗುವನ್ನು ಹತ್ಯೆಗೈದ ಮಹಿಳೆಯ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

15229
Jaya Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು