News Kannada
Thursday, October 05 2023
ಮಂಗಳೂರು

ಸುರತ್ಕಲ್: ಬಲೆಗೆ ಬಿದ್ದ 400 ಕೆಜಿಯಷ್ಟು ಮೀನು, ಖರೀದಿಗೆ ಮುಗಿಬಿದ್ದ ಜನ

lots of fish in the net
Photo Credit : Freepik

ಸುರತ್ಕಲ್: ಮಂಗಳೂರು ನಗರದ ಸುರತ್ಕಲ್ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಇಂದು ಬೆಳಗ್ಗೆ ಮೀನುಗಾರನೊಬ್ಬ ಹಾಕಿದ ಬಲೆಗೆ ರಾಶಿ ರಾಶಿ ಮೀನು ಬಿದ್ದಿದೆ. ವಿವಿಧ ಮೀನುಗಳ ರಾಶಿಯ ಖರೀದಿಗೆ ಮೀನುಪ್ರಿಯರು ಮುಗಿಬಿದ್ದಿದ್ದಾರೆ.

ಜೀವನ್ ಪಿರೇರಾ ಎಂಬ ಮೀನುಗಾರ ಹಾಕಿರುವ ಕೈರಂಪೊನಿ ಬಲೆಗೆ ಮತ್ಯ್ಯ ಸಮೂಹವೇ ಬಿದ್ದಿದೆ. ದಡದಿಂದ ಬೀಸುವ ಕೈರಂಪೊನಿ ಬಲೆಗೆ ಸುಮಾರು 400 ಕೆಜಿಯಷ್ಟು ಮೀನು ಬಿದ್ದಿರೋದು ಮೀನುಗಾರನಿಗೆ ಅದೃಷ್ಟ ಲಕ್ಷ್ಮಿಯೇ ಒಲಿದಂತಾಗಿದೆ.

ಇವರು ಹಾಕಿರುವ ಕೈರಂಪೊನಿ ಬಲೆಗೆ ಬಂಗುಡೆ, ಕೊಡ್ಡಾಯಿ, ಕಲ್ಲೂರು ಮೀನುಗಳ ಸಮೂಹವೇ ಬಿದ್ದಿದೆ. ಈ ರಾಶಿ ರಾಶಿ ಮೀನುಗಳನ್ನು ಕಂಡು ಜನರು ಖರೀದಿಗೆ ಮುಗಿಬಿದ್ದಿದ್ದಾರೆ.

See also  ಬೆಂಗಳೂರು: ನಾವು ವ್ಯಕ್ತಿ ಪೂಜೆ ಮಾಡಲ್ಲ ಎಂದ ಸಚಿವ ಸುನಿಲ್ ಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು