News Kannada
Monday, October 02 2023
ಮಂಗಳೂರು

ಮಂಗಳೂರು: ಬೆಳ್ತಂಗಡಿ ಶಾಸಕರ ಕಾರು ಅಡ್ಡಗಟ್ಟಿ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳು

BJP's Harish Poonja wins in Belthangady
Photo Credit : Facebook

ಮಂಗಳೂರು: ಅಪರಿಚಿತ ಸ್ಕಾರ್ಪಿಯೋ ಕಾರೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ಕಾರನ್ನು ಹಿಂಬಾಲಿಸಿ, ಅಡ್ಡಗಟ್ಟಿ ಆಯುಧ ತೋರಿಸಿ ಜೀವ ಬೆದರಿಕೆ ಒಡ್ಡಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಫರಂಗಿ ಪೇಟೆ ಎಂಬಲ್ಲಿ ಅ.13 ರಂದು ತಡ ರಾತ್ರಿ ನಡೆದಿದೆ.

ಈ ಬಗ್ಗೆ ಹರೀಶ್ ಪೂಂಜಾರವರ ಕಾರು ಚಾಲಕ ನೀಡಿದ ದೂರಿನಂತೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುರುವಾರ ಸಂಜೆ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ, ಹರೀಶ್ ಪೂಂಜಾರವರು ಬೆಳ್ತಂಗಡಿಗೆ ಕಾರಿನಲ್ಲಿ ಹಿಂತಿರುಗಿ ಹೋಗುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಮೊದಲು ಶಾಸಕರ ಕಾರನ್ನು ದುಷ್ಕರ್ಮಿಯು ಬಿಳಿ ಸ್ಕಾರ್ಪಿಯೋ ಕಾರಿನಲ್ಲಿ ಹಿಂಬಾಲಿಸಿದ್ದಾನೆ.

ಶಾಸಕರಿದ್ದ ಕಾರು ಫರಂಗಿ ಪೇಟೆಯ ಮೀನು ಮಾರುಕಟ್ಟೆ ಬಳಿ ತಲುಪುತ್ತಲೇ, ದುಷ್ಕರ್ಮಿ ತನ್ನ ಕಾರನ್ನು ಅದಕ್ಕೆ ಅಡ್ಡ ನಿಲ್ಲಿಸಿ ಕಾರಿನಲ್ಲಿದ್ದವರಿಗೆ ಅವಾಚ್ಯ ಶಬ್ದಗಳಿಂದ ಬೈದು ತನ್ನ ಕೈಯಲಿದ್ದ ಆಯುಧವನ್ನು ತೋರಿಸಿ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.

See also  20 ಅಡಿ ಕಂದಕಕ್ಕೆ ಉರುಳಿ ಬಿದ್ದ ಮಗು ಸಹಿತ ಐವರಿದ್ದ ಕಾರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು