News Kannada
Monday, October 02 2023
ಮಂಗಳೂರು

ಸುರತ್ಕಲ್: ಟೋಲ್ ಗೇಟ್ ಮುತ್ತಿಗೆ ಸಂಬಂಧಿಸಿ ಜನಪ್ರತಿನಿಧಿಗಳ ಸಭೆ ಕರೆದು ಚರ್ಚಿಸಲಿ- ಖಾದರ್

BJP government will last only 35 days: U T Khader
Photo Credit : News Kannada

 ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ತಕ್ಷಣ ಹೋರಾಟಗಾರರು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯನ್ನು ಕರೆದು ಚರ್ಚಿಸಲಿ ಎಂದು ಯು.ಟಿ.ಖಾದರ್ ತಿಳಿಸಿದರು.

ಸುರತ್ಕಲ್ ಟೋಲ್ ಗೆ ಬಗ್ಗೆ ನಾನು ವಿಧಾನ ಸಭೆಯ ಸದನದಲ್ಲಿ ಪ್ರಸ್ತಾಪಿಸಿದಾಗಲೇ ಸರಕಾರವು ಇದನ್ನು ಅನಧಿಕೃತ ಹಾಗೂ ನಿಯಮ ಬಾಹಿರ ಎಂದು ಒಪ್ಪಿಕೊಂಡಿತ್ತು. ಆದರೆ ಕೆಲವೊಂದು ತಾಂತ್ರಿಕ ಕಾರಣಗಳಿಂದ ಟೋಲ್ ಗೇಟ್ ತೆಗೆಯಲು ಸಮಯಾವಕಾಶ ಬೇಕೆಂದು ಹೇಳಿತ್ತು. ತಕ್ಷಣ ಜಿಲ್ಲಾಧಿಕಾರಿಗಳು ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ ಕರೆದು ಟೋಲ್ ತೆರವುಗೊಳಿಸಲು ಇದ್ದ ತಾಂತ್ರಿಕ ಕಾರಣಗನ್ನು ನಿವಾರಿಸಬೇಕಿತ್ತು.ಆದರೆ ಜಿಲ್ಲಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದೇ ಇಷ್ಷೆಲ್ಲಾ ಗೊಂದಲಗಳಿಗೆ ಕಾರಣ ಎಂದು ಶಾಸಕ,ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅಭಿಪ್ರಾಯ ಪಟ್ಟರು.

ತಕ್ಷಣ ಜಿಲ್ಲಾಧಿಕಾರಿಗಳು ಹೋರಾಟಗಾರರ ಹಕ್ಕನ್ನು ಪೋಲಿಸ್ ಇಲಾಖೆಯ ಮೂಲಕ ಹತ್ತಿಕ್ಕದೇ ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದು ಕೊಂಡು ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು,ಜನಪ್ರತಿನಿಧಿಗಳು ಹಾಗೂ ಹೋರಾಟಗಾರರನ್ನೊಳಗೊಂಡ ಸಭೆ ಕರೆಯಬೇಕೆಂದು ಜಿಲ್ಲಾಧಿಕಾರಿಗಳಿಗೆ ಯು.ಟಿ.ಖಾದರ್ ಒತ್ತಾಯಿಸಿದರು.

ಅಲ್ಲದೆ ಜವಾಬ್ದಾರಿಯುತ ಸ್ಥಾನದಲ್ಲಿರುವ ಮಾನ್ಯ ಸಂಸದರಾದ ನಳೀನ್ ಕುಮಾರ್ ಕಟೀಲು ರವರು ಗೊಂದಲಗಳನ್ನು ನಿವಾರಿಸಬೇಕೇ ಹೊರತು ಈ ಬಗ್ಗೆ ಕೋರ್ಟಿಗೆ ಹೋಗುತ್ತೇನೆಂಬ ಹೇಳಿಕೆ ನೀಡಿ ಜನರನ್ನು ಇನ್ನಷ್ಟು ಗೊಂದಲಕ್ಕೀಡು ಮಾಡುವುದು ಸರಿಯಲ್ಲ ಎಂದು ಯು.ಟಿ.ಖಾದರ್ ತಿಳಿಸಿದರು.

See also  ಸಾಕುನಾಯಿಯ ಮೇಲೆ ಚಿರತೆ ದಾಳಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು