News Kannada
Monday, September 25 2023
ಮಂಗಳೂರು

ಬೆಳ್ತಂಗಡಿ: ನಾರಾಯಣಗುರು ಕೋಶ ನಿರ್ಮಾಣ ಮತ್ತು ಅನುದಾನ ನೀಡಿದ ಕ್ರಮಕ್ಕೆ ಬ್ರಹ್ಮಾನಂದ ಶ್ರೀ ಸ್ವಾಗತ

Belthangady: Brahmananda Sri welcomes narayana guru kosha construction and grant of grants
Photo Credit : Facebook

ಬೆಳ್ತಂಗಡಿ: ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಕೋಶವನ್ನು ನಿರ್ಮಾಣ ಮಾಡಿ ಅದಕ್ಕೆ ಬೇಕಾದ ಅನುದಾನವನ್ನು ಒದಗಿಸಿದ ಕ್ರಮವನ್ನು ಧರ್ಮಸ್ಥಳ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರು ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸ್ವಾಗತಿಸಿ ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಈಡಿಗ, ಬಿಲ್ಲವ, ನಾಮಧಾರಿಗಳು ಸೇರಿದಂತೆ 26 ಉಪ ಪಂಗಡಗಳನ್ನು ನಾರಾಯಣ ಗುರುಗಳ ಹೆಸರಿನಲ್ಲಿ ಅಭಿವೃದ್ಧಿ ಮಾಡಲು ಈ ಸಮಾಜದ ಆರ್ಥಿಕ, ಶೈಕ್ಷಣಿಕ ಸಾಮಾಜಿಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಒಂದು ದೃಢ ನಿರ್ಧಾರವನ್ನು ಮಾಡಿ ಸರಕಾರಿ ಆದೇಶವನ್ನು ಮಾಡಿರುವುದು ನಮಗೆಲ್ಲಾ ಸಂತೋಷದ ವಿಚಾರವಾಗಿರುತ್ತದೆ.

ಈ ವಿಚಾರದಲ್ಲಿ ಸರಕಾರಕ್ಕೆ ಮಾರ್ಗದರ್ಶನ ಮಾಡಿದ ಈ ಜಿಲ್ಲೆಯ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕರವರಿಗೆ ಹಾಗೂ ಇಂಧನ ಇಲಾಖೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್‌ ಕುಮಾರ್‌ರವರಿಗೆ ಹಾಗೂ ಹಿಂದುಳಿದ ವರ್ಗದ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಶೂಜಾರಿಯವರಿಗೆ ಹಾಗೂ ಬಂದರು, ಮೀನುಗಾರಿಕಾ ಸಚಿವರಾದ ಎಸ್. ಅಗಾರರವರಿಗೆ ಸಂಬಂಧ ಪಟ್ಟ ಎಲ್ಲಾ ಶಾಸಕರಿಗೆ ಹಾಗೂ ಈ ವಿಚಾರದಲ್ಲಿ ಸದಾ ಸರಕಾರದ ಗಮನ ಸೆಳೆದ ಸ್ವಾಮೀಜಿಗಳಿಗೆ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ವತಿಯಿಂದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

See also  ಡಿ.3ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು