News Kannada
Sunday, September 24 2023
ಮಂಗಳೂರು

ಬಂಟ್ವಾಳ : ಕಾಂಗ್ರೆಸ್ ಕಾರ್ಯಕರ್ತ ವಸಂತ ಅವರು ಬಿಜೆಪಿ ಸೇರ್ಪಡೆ

vasanth
Photo Credit : By Author

ಬಂಟ್ವಾಳ : ದೇವಶ್ಯಪಡೂರು ಗ್ರಾಮದ ಕ್ರಿಯಾಶೀಲ ಕಾಂಗ್ರೆಸ್ ಕಾರ್ಯಕರ್ತ ವಸಂತ ಅವರನ್ನು ಬಿಜೆಪಿ ಕಚೇರಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಉಪಸ್ಥಿತಿಯಲ್ಲಿ ಬಿಜೆಪಿ ಶಾಲು ಹಾಕಿ , ಬಿಜೆಪಿ ಧ್ವಜವನ್ನು ನೀಡಿ ಸೇರ್ಪಡೆ ಮಾಡಲಾಯಿತು.

ಬಳಿಕ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್,ಅವರು ದೇಶದ, ಹಿಂದುತ್ವದ ಸಂಸ್ಕೃತಿಯ ಮೇಲೆ ಪ್ರೀತಿಯಿರುವ,ಭವಿಷ್ಯದ ಚಿಂತನೆಯಿರುವ ಪ್ರತಿಯೊಬ್ಬನಿಗೂ ಬಿಜೆಪಿ ಪಕ್ಷ ಸದಾ ತೆರೆದಿರುತ್ತದೆ. ಯಾವುದೇ ರಾಜಕೀಯ ಪಕ್ಷಕ್ಕೆ ಧ್ಯೇಯ, ಬದ್ದತೆ, ಸಿದ್ದಾಂತ ಬೇಕು, ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಬೇಕು, ಅ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಅವರು ಹೇಳಿದರು.

ಅಭಿವೃದ್ಧಿ ವಿಚಾರದಲ್ಲಿ ಮಾತನಾಡಲು ಅಧಿಕಾರ ಇಲ್ಲದವರು, ಪ್ರಸ್ತುತ ದಿನಗಳಲ್ಲಿ ಟೀಕೆ ಟಿಪ್ಪಣಿ ಮಾಡುತ್ತಿರುವ ಕಾಂಗ್ರೇಸ್ ಪಕ್ಷ ಡೆಪೋಸಿಟ್ ಇಲ್ಲದ ಹೀನಾಯ ಸ್ಥಿತಿಗೆ ತಲುಪಿದೆ. ಬಿಜೆಪಿಯ ಬೆಳವಣಿಗೆಯನ್ನು ನೋಡಿ ಬೇರೆ ಬೇರೆ ಪಕ್ಷದ ನಾಯಕರು , ಕಾರ್ಯಕರ್ತರು ಬಿಜೆಪಿಯತ್ತ ಒಲವು ತೋರಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಒಳಚರಂಡಿ ನಿಗಮ‌ಮಂಡಳಿ ಸದಸ್ಯೆ ಸುಲೋಚನ ಜಿ.ಕೆ.ಭಟ್, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಪ್ರಮುಖರಾದ ಪುಷ್ಪರಾಜ ಚೌಟ, ಪುರುಷೋತ್ತಮ ಶೆಟ್ಟಿ, ಪ್ರಕಾಶ್ ಅಂಚನ್, ಸದಾನಂದ ನಾವೂರ, ಕಮಲಾಕ್ಷಿ ಕೆ.ಪೂಜಾರಿ, ಗೋಪಾಲ ಸುವರ್ಣ, ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ಮೋನಪ್ಪ ದೇವಸ್ಯ, ಉಪಸ್ಥಿತರಿದ್ದರು.

See also  ಬೆಳಗಾವಿ: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು