News Kannada
Friday, September 22 2023
ಮಂಗಳೂರು

ಮಂಗಳೂರು: ಜನತೆ ಊಹಾಪೋಹ ಸುಳ್ಳು ಸುದ್ದಿಗಳಿಗೆ ಕಿವಿಕೊಡದೆ ಸೌಹಾರ್ದತೆ ಕಾಪಾಡಬೇಕು- ಜಿಆರ್ ಲೋಬೊ

g r
Photo Credit : R Bhat

ಮಂಗಳೂರು: ಗೂಂಡಾ ಕಾಯ್ದೆ ಭಯೋತ್ಪಾದನಾ ನಿಗ್ರಹ ಮೊದಲಾದ ಕಾನೂನು ಜಾರಿಯಲ್ಲಿದ್ದರೂ ಗೋಡೆ ಬರಹದಂತಹ ಪ್ರಕರಣಗಳು ನಡೆದಾಗ ಸರಕಾರ ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ ಜಿಲ್ಲೆಯಲ್ಲಿ ಕುಕ್ಕರ್ ಬಾಂಬ್ ಸ್ಫೋಟದಂತ ಪ್ರಕರಣಗಳು ನಡೆಯುತ್ತಿರಲಿಲ್ಲ. ಸರಕಾರದ ವೈಫಲ್ಯದಿಂದ ಇಂದು ಸಮಾಜದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿದೆ ಎಂದು ಮಾಜಿ ಶಾಸಕ ಜಿಆರ್ ಲೋಬೊ ಆರೋಪಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಮುದಾಯದ ಒಬ್ಬ ವ್ಯಕ್ತಿಯ ಅಪರಾಧಕ್ಕೆ ಇಡೀ ಸಮುದಾಯವನ್ನು ಅನುಮಾನದಿಂದ ನೋಡುವ ಪ್ರಕ್ರಿಯೆ ನಡೆಯುತ್ತಿರುವುದು ಖಂಡನೆಯ ಜನತೆ ಇಂಥ ಊಹಾಪೋಹ ಸುಳ್ಳು ಸುದ್ದಿಗಳಿಗೆ ಕಿವಿಕೊಡದೆ ಸೌಹಾರ್ದತೆ ಕಾಪಾಡಬೇಕೆಂದು ಕರೆ ನೀಡಿದರು.

ಕುಕ್ಕರ್ ಬಾಮ್ ಸ್ಫೋಟಕ್ಕೆ ಪ್ರಕರಣಕ್ಕೆ ಸಂಬಂಧಿಸಿದ ಕೆಲವೊಂದು ಪತ್ರಿಕೆ ಚಾನೆಲ್ ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹೂವ ಪೋಹದ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ ಆದರೆ ಇಂಥ ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮ ಆಗುತ್ತಿಲ್ಲ, ಇತ್ತೀಚಿಗೆ ವ್ಯಕ್ತಿಯೊಬ್ಬರು ಗರ್ಭಿಣಿ ಮಹಿಳೆಗೆ ಚಿರತೆಯ ಮುಖ ಹಾಕಿದ ಚಿತ್ರ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದಕ್ಕಾಗಿ ರಾತೋ ರಾತ್ರಿ ಅವರನ್ನು ಬಂಧಿಸಿ ಜಾಮೀನು ರಹಿತ ಪ್ರಕರಣ ದಾಖಲಿಸಲಾಗಿದೆ, ಆದರೆ ಸಮಾಜದಲ್ಲಿ ಒಡಕು ಸೃಷ್ಟಿಸುವ ಸುದ್ದಿಗಳನ್ನು ಪ್ರಸಾರ ಮಾಡುವವರ ಬಗ್ಗೆ ಸರಕಾರ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ಯಾಕೆ ದಾಖಲಿಸುತ್ತಿಲ್ಲ ಇಂತಹದೊಂದು ನೀತಿ ಯಾಕೆ ಎಂದವರು ಪ್ರಶ್ನಿಸಿದರು.

ಚುನಾವಣಾ ಹತ್ತಿರ ಬರುವಾಗ ಸಮಾಜದಲ್ಲಿ ಇಂತಹ ಗೊಂದಲದ ವಾತಾವರಣ ಸೃಷ್ಟಿಸುವ ಕೆಲಸವನ್ನು ಬಿಜೆಪಿ ಮಾಡುತ್ತಾ ಬಂದಿದೆ. ಇದರಿಂದಾಗಿ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾತಿ ಕುಂಠಿತಗೊಳ್ಳುತ್ತಿದೆ ಬಂಡವಾಳ ಹೂಡಿಕೆಗೆ ಹಿಂದೇಟು ಹಾಕಲಾಗುತ್ತಿದೆ ಪ್ರವಾಸೋದ್ಯಮ ಅಭಿವೃದ್ಧಿಯಾಗುತ್ತಿಲ್ಲ. ಪ್ರತಿಷ್ಠಿತ ಕಾಲೇಜಿನ ಪ್ರೊಫೆಸರ್ ಒಬ್ರು ವಿದ್ಯಾರ್ಥಿಯನ್ನು ಭಯೋತ್ಪಾದ ಎನ್ನುವ ಮನಸ್ಥಿತಿಗೆ ಯಾರು ಕಾರಣ , ಇತ್ತೀಚಿಗೆ ನಂತೂರ್ ನಲ್ಲಿ ಒಂದು ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಪರಸ್ಪರ ಮಾತನಾಡಿದಕ್ಕೆ ಅವರನ್ನು ಹಿಡಿದು ಹೊಡೆಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ . ಪೊಲೀಸರು ಇಂತಹ ವಿರುದ್ಧ ಕ್ರಮ ಯಾಕೆ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನೆಸಿದರು ಶಾಂತಿ ಕೆದಡಿಸುವ ಯಾವುದೇ ಸಂಘ ಸಂಸ್ಥೆಗಳನ್ನು ನಿಷೇಧಿಸಿ ಗುಂಡ ಕಾಯ್ದೆಯನ್ನು ಏರಿದಾಗ ಸಮಾಜದಲ್ಲಿ ಸೋಹಾರ್ದತೆ ನೆಲೆಸಲು ಸಾಧ್ಯವಾಗಲಿದೆ ಎಂದು ಹೇಳಿದರು.

ವಿದ್ಯುತ್ ದರ ಹಾಲು ಹಾಗೂ ಹಾಲಿನ ಉತ್ಪನ್ನಗಳ ಬೆಳೆ ಏರಿಕೆಯ ಹೊರಗೆ ಜಾತಿಗೆ ಜಿಎಸ್ಟಿಯಿಂದ ಜನಜೀವನ ಸಂಕಷ್ಟದಲ್ಲಿದೆ ಆಡಳಿತ ಖರ್ಚು ಕಡಿಮೆ ಮಾಡಿದಾಗ ಈ ರೀತಿ ಜನರ ಮೇಲಿನ ತೆರಿಗೆ ಹೊರೆ ಕಡಿಮೆ ಮಾಡಬಹುದು ಆದರೆ ಸರಕಾರಿ ಬಗ್ಗೆ ನಿರ್ಲಕ್ಷ ವಹಿಸಿದೆ ಬಿಜೆಪಿ ಆಡಳಿತ ಹಾಗೂ ಪೊಲೀಸ್ ವ್ಯವಸ್ಥೆ ವೈಫಲ್ಯಗೊಂಡಿದ್ದು ಇಂತಹ ಸರಕಾರ ಬೇಕಾ ಎಂಬ ಬಗ್ಗೆ ಜನ ಯೋಚನೆ ಮಾಡಬೇಕಾಗಿದೆ ಎಂದು ಅವರು ಹೇಳಿದರು.

See also  ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ: ಸಿಎಂ ಬೊಮ್ಮಾಯಿ

ಪ್ರತಿ ವಿಚಾರದಲ್ಲೂ ವಿಪಕ್ಷ ದೂರು ನೀಡುತ್ತಾ ಹೋಗಬೇಕೆಂದೇನಿಲ್ಲ ಜನರಿಗೆ ಜಾಗೃತಿ ಮೂಡಿಸುವುದು ಆಡಳಿತ ಪಕ್ಷದ ವೈಫಲ್ಯವನ್ನು ಎತ್ತಿ ತೋರಿಸುವುದು ವಿಪಕ್ಷದ ಕರ್ತವ್ಯ ಅದನ್ನು ನಾವು ಮಾಡುತ್ತೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು