News Kannada
Sunday, December 10 2023
ಮಂಗಳೂರು

ಮಂಗಳೂರು: ಬಿಜೆಪಿ ಸರಕಾರ ಮೀನುಗಾರರಿಗೆ ಯಾವುದೇ ನೆರವು ನೀಡಿಲ್ಲ- ಯು.ಟಿ. ಖಾದರ್

Govt plans to digitise state assembly proceedings Khader
Photo Credit : News Kannada

ಮಂಗಳೂರು: ರಾಜ್ಯ ಬಿಜೆಪಿ ಸರಕಾರ ಮೀನುಗಾರರಿಗೆ ವಸತಿ, ಸಬ್ಸಿಡಿ ಸಹಿತ ಯಾವುದೇ ನೆರವು ನೀಡಿಲ್ಲ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಆರೋಪಿಸಿದ್ದಾರೆ.

ಬಿಜೆಪಿ ಸರಕಾರ ಮೀನುಗಾರರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ತಮ್ಮ ರಾಜಕೀಯ ಅಸ್ತಿತ್ವಕ್ಕೆ ಮೀನುಗಾರರ ಜೀವವನ್ನು ಬಳಸುತ್ತಿದ್ದಾರೆ. ಅವರ ಅಭಿವೃದ್ಧಿ ನಿಟ್ಟಿನಲ್ಲಿ, ಅವರಿಗೆ ಬದುಕನ್ನು ಕಟ್ಟಿಕೊಡಲು ಯಾವುದೇ ಕ್ರಮ ಕೈಗೊಂಡಿಲ್ಲ.

ಕಾಂಗ್ರೆಸ್ ಸರಕಾರ ತಂದಿದ್ದ ಯೋಜನೆಗಳನ್ನೂ ಸಂಪೂರ್ಣಸ್ಥಗಿತಗೊಳಿಸಿದ್ದಾರೆ. ಸಬ್ಸಿಡಿ ದರದ ಸೀಮೆಎಣ್ಣೆಯನ್ನು ನೀಡಲೂ ಬಿಜೆಪಿ ಸರಕಾರ ಹಿಂದೇಟು ಹಾಕಿದೆ ಎಂದು ಖಾದರ್ ಹೇಳಿದ್ದಾರೆ.

ನಮ್ಮ ಸರಕಾರ ಇದ್ದಾಗ ಮೀನುಗಾರರ ನೋವಿಗೆ ಸ್ಪಂದಿಸುತ್ತಿತ್ತು. ಬಿಜೆಪಿ ಸರಕಾರ ಬಂದ ಬಳಿಕ ಮೀನುಗಾರರಿಗೆ ಒಂದೇ ಒಂದು ಮನೆಯನ್ನೂ ನೀಡಲು ಮುಂದಾಗಿಲ್ಲ. ಕೆಲವು ದಿನಗಳ ಹಿಂದೆ ಪಟ್ಟಿ ಕಳುಹಿಸಿದ್ದಾರೆ. ಆದರೆ ಅಲ್ಲಿನ ಮೀನುಗಾರರಿಗೆ ಮನೆ ಕೊಟ್ಟಿಲ್ಲ. ಯಾವ ರೀತಿಯಲ್ಲಿ ಮೀನುಗಾರರನ್ನು ನಡೆಸಿಕೊಳ್ಳುತ್ತಿದ್ದಾರೆ ಎನ್ನವುದಕ್ಕೆ ಸಾಕ್ಷಿ ಇದು.

ಕರಾವಳಿಯ ಶಾಸಕರಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್ ಯಾರೂ ಕೂಡ ಮೀನುಗಾರರ ಪರವಾಗಿ ಕೆಲಸ ಮಾಡಿಲ್ಲ. ಮುಖ್ಯಮಂತ್ರಿ ಮಂಗಳೂರಿಗೆ ಬಂದ ಸಂದರ್ಭದಲ್ಲೂ ಮೀನುಗಾರರ ಸಮಸ್ಯೆಯನ್ನು ಮುಂದಿಡುವ ಕೆಲಸ ಮಾಡಿಲ್ಲ. ಹೊಸ ಯೋಜನೆ ಬಿಡಿ, ಕಾಂಗ್ರೆಸ್‌ನ ಯೋಜನೆಗಳನ್ನೂ ಕೂಡಾ ಮೀನುಗಾರರಿಗೆ ತಲುಪಿಸಲು ಇವರಿಗೆ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮೀನುಗಾರರ ಸಮಸ್ಯೆಗೆ ಸ್ಪಂದಿಸದೇ ಇದ್ದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಮುಂದಿನ 10 ದಿನಗಳ ಒಳಗೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಖಾದರ್ ಎಚ್ಚರಿಸಿದರು.

See also  ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ಬಿ- ವೋಕ್ ಅಪೇಕ್ಸ್ - 2022 ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು