News Kannada
Sunday, December 10 2023
ಕ್ಯಾಂಪಸ್

ಮಂಗಳೂರು: ಮಹಿಳೆಯರ ಮೇಲಿನ ದೌರ್ಜನ್ಯ ಆರ್ಥಿಕ ಬೆಳವಣಿಗೆಗೂ ಅಪಾಯ

Mangalore University Vice-Chancellor honoured with award
Photo Credit : News Kannada

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಇತ್ತೀಚೆಗೆ ಯುಜಿಸಿ ಮಹಿಳಾ ಅಧ್ಯಯನ ಕೇಂದ್ರ, ಭಾರತಿದಾಸನ್ ವಿಶ್ವವಿದ್ಯಾನಿಲಯ, ಭಾರತೀಯ ಮಹಿಳಾ ಅಧ್ಯಯನ ಸಂಘ (ಐಎಡಬ್ಲ್ಯುಎಸ್), ಮಹಿಳಾ ಅಧ್ಯಯನಕ್ಕಾಗಿ ಪ್ರಾದೇಶಿಕ ಸಂಘ ಮತ್ತು ಅಖಿಲ ಭಾರತ ಮಹಿಳಾ ಅಧ್ಯಯನ ವಿದ್ಯಾರ್ಥಿಗಳ ವೇದಿಕೆ ಸಹಯೋಗದಲ್ಲಿ ಮಹಿಳೆಯರು ಮತ್ತು ಬಾಲಕಿಯರ ವಿರುದ್ಧದ ಹಿಂಸೆಯ ವಿರುದ್ಧ ಜಾಗೃತಿಗಾಗಿ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸಿತ್ತು.

ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ತಮ್ಮ ಉದ್ಘಾಟನಾ ಭಾಷಣದಲ್ಲಿ, ಮಹಿಳೆಯರ ಮೇಲಿನ ಹೆಚ್ಚಿನ ದೌರ್ಜನ್ಯ ಸಮಾಜದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ. ಮಹಿಳೆಯರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಗೆ ತಡೆಯಾಗುತ್ತದೆ. ಇದು ಪರೋಕ್ಷವಾಗಿ ಆರ್ಥಿಕ ಅಭಿವೃದ್ಧಿಗೆ ಅಪಾಯ. ಹೀಗಾಗಿ ಮಹಿಳೆಯರ ವಿರುದ್ಧದ ಹಿಂಸೆಯನ್ನು ಜಾಗತಿಕ ಸಾಂಕ್ರಾಮಿಕ ಎಂದು ಪರಿಗಣಿಸಬೇಕು, ಎಂದರು.

“ವಿಶ್ವವಿದ್ಯಾನಿಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ, ಲಿಂಗ, ಜಾತಿ, ವರ್ಗ, ಪ್ರದೇಶ ಅಥವಾ ಧರ್ಮವನ್ನು ಲೆಕ್ಕಿಸದೆ ಪ್ರತಿಯೊಬ್ಬರನ್ನು ಗೌರವಿಸುವ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕಿದೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಈ ಕುರಿತ ಸ್ಪಷ್ಟ ನೀತಿಯನ್ನು ಅಭಿವೃದ್ಧಿಪಡಿಸಿದ್ದು, ನಮ್ಮ ಕ್ಯಾಂಪಸ್ ಅನ್ನು ಕಲಿಕೆಗೆ ಸುರಕ್ಷಿತ ಸ್ಥಳವನ್ನಾಗಿ ಮಾಡಲು ನಾವು ಬದ್ಧರಾಗಿದ್ದೇವೆ,” ಎಂದರು.

ಮುಖ್ಯ ಭಾಷಣದಲ್ಲಿ, ಭಾರತಿದಾಸನ್ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗದ ಪ್ರೊ.ಎನ್.ಮಣಿಮೇಕಲೈ ಮಾತನಾಡಿ, ಈ ಅಭಿಯಾನದಲ್ಲಿ ಹೆಣ್ಣುಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿಯೊಬ್ಬರೂ ಭಾಗವಹಿಸಲು ಅವಕಾಶವಿದೆ. ಇದು ಹಿಂಸೆಯ ವಿರುದ್ಧ ಧ್ವನಿ ಎತ್ತಬೇಕಾದ ಸಮಯ, ಎಂದರು.

ಮಂಗಳೂರು ವಿಶ್ವವಿದ್ಯಾನಿಲಯ ಯುಜಿಸಿ ಮಹಿಳಾ ಅಧ್ಯಯನ ಕೇಂದ್ರದ ಮಾಜಿ ನಿರ್ದೇಶಕಿ ಪ್ರೊ.ಕಿಶೋರಿ ನಾಯಕ್‌ ಕೆ. ಅಧ್ಯಕ್ಷತೆ ವಹಿಸಿದ್ದರು. ಪ್ರಸ್ತುತ ನಿರ್ದೇಶಕಿ ಡಾ.ಅನಿತಾ ರವಿಶಂಕರ್‌ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಗುರುಗೋವಿಂದ್ ಸಿಂಗ್ ಇಂದ್ರಪ್ರಸ್ಥ ವಿವಿಯ, ಸ್ಕೂಲ್ ಆಫ್ ಕಮ್ಯುನಿಕೇಷನ್ ಹಿರಿಯ ಸಹಾಯಕ ಪ್ರಾಧ್ಯಾಪಕಿ ಡಾ.ಕುಲ್ವೀನ್ ಟ್ರೆಹಾನ್, ಡಿಇಡಿಎಸ್ ನಿರ್ದೇಶಕಿ ಮೆರ್ಲಿನ್ ಮಾರ್ಟಿಸ್, ಸಖಿ ಒನ್ ಸ್ಟಾಪ್ ಸೆಂಟರ್ ಆಡಳಿತಾಧಿಕಾರಿ ಪ್ರಿಯಾ ರಾಜಮೋಹನ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಿ ಡಾ. ಯಶಸ್ವಿನಿ ಬಟ್ಟಂಗಾಯ ಉಪಸ್ಥಿತರಿದ್ದರು.

See also  ಬೆಳ್ತಂಗಡಿ: ೨೦.೩೬ ಕೋಟಿ ರೂ. ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು