News Kannada
Wednesday, October 04 2023
ಮಂಗಳೂರು

ಮಂಗಳೂರು: ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನಾಲ್ಕು ದಿನಗಳ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮ

Mangaluru: A four-day entrepreneurship training programme for undergraduate and postgraduate students
Photo Credit : News Kannada

ಮಂಗಳೂರು: ನಗರದ ಸ್ವಸ್ತಿಕ ನ್ಯಾಶನಲ್ ಸ್ಕೂಲ್ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನಾಲ್ಕು ದಿನಗಳ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.

ಮಂಗಳೂರಿನಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಮುಖ್ಯ ಸಂಚಾಲಕ ಎಸ್.ಎಸ್.ನಾಯಕ್ ಮತ್ತು ಸ್ವಸ್ತಿಕ್ ನ್ಯಾಶನಲ್ ಸ್ಕೂಲ್ ನ ಅಧ್ಯಕ್ಷ ಡಾ. ರಾಘವೇಂದ್ರ ಹೊಳ್ಳ “ಸ್ಟಾರ್ಟಪ್ ಮೈಂಡ್ ಸೆಟ್” ಶೀರ್ಷಿಕೆ ಅಡಿಯಲ್ಲಿ ಉದ್ಯಮಶೀಲತಾ ತರಬೇತಿ ಆಯೋಜಿಸುತ್ತಿದ್ದು, ಇತ್ತೀಚಿನ ಅವಿಷ್ಕಾರಗಳು, ಚಿಂತನೆಗಳು, ಮತ್ತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಇದು ವೇದಿಕೆಯನ್ನು ಒದಗಿಸುತ್ತದೆ ಎಂದರು.

ಡಿಸೆಂಬರ್ ೧೯ರಿಂದ ಡಿಸೆಂಬರ್ ೨೨ರವರೆಗೆ ನಡೆಯುವ ಕಾರ್ಯಾಗಾರದಲ್ಲಿ ಉದ್ಯಮಗಳಿಗೆ ದಾಖಲಾತಿ ಮಾಡಿಕೊಳ್ಳುವ ಕುರಿತಂತೆ ವಿವರ, ಸ್ಟಾರ್ಟ್ ಅಪ್ ಯೋಜನೆಯನ್ನು ಕಾರ್ಯಗತ ಮಾಡಲು ವ್ಯವಹಾರ ಯೋಜನೆಯನ್ನು ರೂಪಿಸುವ ವಿಧಾನ ಇತ್ಯಾದಿಗಳ ಬಗ್ಗೆ ತಿಳಿಸಿಕೊಡಲಾಗುವುದು ಎಂದೂ ಅವರು ವಿವರಿಸಿದರು. ಯು.ರಾಮರಾವ್, ಶ್ರೀಕಾಂತ ನಾಯಕ್, ಡಾ. ಮಾಲಿನಿ ಹೆಬ್ಬಾರ್ ಉಪಸ್ಥಿತರಿದ್ದರು.

See also  ಬೆಳ್ತಂಗಡಿ: ನಿವೃತ್ತ ಭೂ ಮಾಪಕ ರಾಘವೇಂದ್ರ ಹೃದಯಾಘಾತದಿಂದ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು