News Kannada
Sunday, December 10 2023
ಮಂಗಳೂರು

ಕುಂಭಶ್ರೀ ವೈಭವ ಕಾತುರದ ವ್ಯಾಪ್ತಿ ವರ್ಷದಿಂದ ವರ್ಷಕ್ಕೆ ವಿಸ್ತಾರ: ಶಾಸಕ ಹರೀಶ್ ಪೂಂಜ

KUMBHA
Photo Credit : By Author

ವೇಣೂರು: ಕುಂಭಶ್ರೀ ವೈಭವ ಕಾತುರದ ವ್ಯಾಪ್ತಿ ವರ್ಷದಿಂದ ವರ್ಷಕ್ಕೆ ವಿಸ್ತಾರವಾಗುತ್ತಿದೆ ಎಂದು ಶಾಸಕ ಹರೀಶ್ ಪೂಂಜ ಬಣ್ಣಿಸಿದರು.

ನಿಟ್ಟಡೆ ಕುಂಭಶ್ರೀ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಯ ಆವರಣದಲ್ಲಿ ಜರಗಿದ ಕುಂಭಶ್ರೀ ವೈಭವದ ಉದ್ಘಾಟನ ಸಮಾರಂಭದಲ್ಲಿ ಅವರು ಮಾತನಾಡಿದರು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಫಾ| ಲಾರೆನ್ಸ್ ಮುಕ್ಕುಯಿ ಮಾತನಾಡಿ, ಜಗತ್ತಿನ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ವಿದ್ಯೆಯಿಂದ ಮಾತ್ರ ಸಾಧ್ಯ ಎಂದರು.

ಕುಂಡದಬೆಟ್ಟು ಜುಮಾ ಮಸೀದಿಯ ಖತೀಬರಾದ ಕೆ.ಎಂ. ಹನೀಫ್ ಸಖಾಫಿ ಮಾತನಾಡಿ ಕುಂಭಶ್ರೀ ವೈಭವ ಶಾಲೆಯ ಶಿಕ್ಷಣ ವ್ಯವಸ್ಥೆಯ ವೈಭವವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಶುಭ ಹಾರೈಸಿದರು. ಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಎಚ್. ಅಧ್ಯಕ್ಷತೆ ವಹಿಸಿದ್ದರು. ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷ ಜನಾರ್ಧನ ಪೂಜಾರಿ ಧ್ವಜಾರೋಹಣ ನೆರವೇರಿಸಿ, ವೇಣೂರು ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್ ವಸ್ತುಪ್ರದರ್ಶನದ ಉದ್ಘಾಟನೆ ನೆರವೇರಿಸಿದರು.

ಖ್ಯಾತ ತುಳು ಚಿತ್ರನಟ ಭೋಜರಾಜ ವಾಮಂಜೂರು, ಕಕ್ಕಿಂಜೆ ಕಾರುಣ್ಯ ಆಂಗ್ಲಮಾಧ್ಯಮ ಶಾಲೆಯ ಸಂಸ್ಥಾಪಕ ಮಹಮ್ಮದ್ ಕೆ., ಕುಕ್ಕೇಡಿ ಗ್ರಾ.ಪಂ. ಸದಸ್ಯೆ ಗುಣವತಿ ಡಿ., ಕುಂಭಶ್ರೀ ವೈಭವ ಸಮಿತಿಯ ಹರೀಶ್ ಕುಮಾರ್, ಗುರುಪ್ರಕಾಶ್ ಕಕ್ಕೆಪದವು, ಶರಬಯ್ಯ, ಬಾಲಕೃಷ್ಣ ಭಟ್, ಜಗದೀಶ್, ಪ್ರಶಾಂತ್, ಗಣೇಶ್ ಕುಂದರ್, ಮುಖ್ಯಶಿಕ್ಷಕಿ ಉಷಾ ಜಿ., ವಿದ್ಯಾರ್ಥಿ ಸಂಘದ ನಾಯಕಿ ಸಿಂಚನಾ ಭಟ್ ಉಪಸ್ಥಿತರಿದ್ದರು.

ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಅಶ್ವಿತ್ ಕುಲಾಲ್ ಸ್ವಾಗತಿಸಿ, ಪ್ರಾಂಶುಪಾಲೆ ಓಮನಾ ವರದಿ ವಾಚಿಸಿದರು. ಶಿಕ್ಷಕಿ ಶ್ವೇತಾ ವಂದಿಸಿದರು. ಅಕ್ಷತಾ ಮತ್ತು ವಿನಯ್ ನಿರೂಪಿಸಿದರು.

ಸಮ್ಮಾನ-ಪ್ರತಿಭಾ ಪುರಸ್ಕಾರ
ಚಿತ್ರನಟ ಭೋಜರಾಜ ವಾಮಂಜೂರು, ಡಾ| ಶಾಂತಿಪ್ರಸಾದ್, ಸುಂದರ ಹೆಗ್ಡೆ ಬಿ.ಇ., ನಿತೀಶ್ ಎಚ್., ಕಾಮಿಡಿ ಕಿಲಾಡಿ ಖ್ಯಾತಿಯ ಅನೀಶ್ ಅಮೀನ್, ಕೆ. ಭಾಸ್ಕರ ಪೈ, ಅಮ್ಮಾಜಿ ಪೂಜಾರಿ, ಅಶೋಕ್ ಪಾಣೂರು, ಮೊಲಿ ಟೆಲ್ಲಿಸ್, ಅಶೋಕ್ ದೇವಾಡಿಗ ಅವರನ್ನು ಸಮ್ಮಾನಿಸಲಾಯಿತು. ಕಳೆದ ಸಾಲಿನಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಾಂಸ್ಕೃತಿಕ ಹಾಗೂ ಕ್ರೀಡೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು.

See also  ಧರ್ಮಸ್ಥಳ: ಕರ್ನಾಟಕ ತುಳು ಅಕಾಡೆಮಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಶೇಷ ಗೌರವಾರ್ಪಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು