News Kannada
Thursday, June 01 2023
ಮಂಗಳೂರು

ಪುತ್ತೂರು: ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವ ಗುಣ ಬೆಳೆಸಿಕೊಳ್ಳಿ- ಶಾಸಕ ಸಂಜೀವ ಮಠಂದೂರು

Photo Credit : By Author

ಪುತ್ತೂರು: ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮಠಂದೂರು ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಇದು ಭವಿಷ್ಯದಲ್ಲಿ ತುಂಬಾ ಪ್ರಯೋಜನಕಾರಿಯಾಗಲಿದೆ ಎಂ ಅವರು, ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಬೇಕೆಂದು ಕರೆ ನೀಡಿದರು.

ಮುಖ್ಯ ಅತಿಥಿ ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಶ್ರೀಧರ ಗೌಡ ಮಾತನಾಡಿ, ವಿದ್ಯಾರ್ಥಿಗಳು ಸಮಾಜದ ಆಸ್ತಿ. ಮಾನವೀಯ ಮೌಲ್ಯಗಳನ್ನು ಬೆಳೆಸಿ ಕೂಳ್ಳುವುದರೊಂದಿಗೆ ಹೆತ್ತವರಿಗೆ ಮತ್ತು ಶಿಕ್ಷಕರಿಗೆ ಹಾಗು ಕಾಲೇಜಿಗೆ ಕೀರ್ತಿ ತರಬೇಕು ಎಂದು ಕರೆನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ರಂಗನಾಥ ರೈ ಗುತ್ತು ಶುಭಹಾರೈಸಿದರು.

ವಿಧ್ಯಾರ್ಥಿ ಕ್ಷೇಮಪಾಲನಾಧಿಕಾರಿ ಮಾರಣ್ಣಅವರು ಕಾಲೇಜಿನ ವಿಧ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೊಧಿಸಿದರು.

ಸಹಾಯಕ ಪ್ರಾಧ್ಯಾಪಕ ಅನಂತಭಟ್ ಪ್ರಾರ್ಥಿಸಿದರು. ಅಂತಿಮ ಬಿಕಾಂ ವಿದ್ಯಾರ್ಥಿ ರಕ್ಷಿತ್ ರೈ ವಂದಿಸಿದರು. ಸಾರ್ಥಕ್ ಟಿ ಕಾರ್ಯಕ್ರಮ ನಿರೂಪಿಸಿದರು. ಐಕ್ಯೂಎಸಿ ಸಂಚಾಲಕ ಡಾ.ಕಾಂತೇಶ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಸಹಕರಿಸಿದರು.

ಪದಾಧಿಕಾರಿಗಳ ಆಯ್ಕೆ

ಉಪಾಧ್ಯಕ್ಷ- ಸಿಂಚನ ಅಂತಿಮ ಬಿಬಿಎ. ಕಾರ್ಯದರ್ಶಿ- ಹರೀಶ್ ಚಂದ್ರ ಅಂತಿಮ ಬಿಎ. ಹಾಗೂ ೨೦೨೨-೨೩ ನೇ ಸಾಲಿನ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ- ಸಾರ್ಥಕ್ ಟಿ. ಅಂತಿಮ ಬಿಕಾಂ. ಜತೆ ಕಾರ್ಯದರ್ಶಿ- ದಿವ್ಯ ಎಂ ಅಂತಿಮ ಬಿಎಸ್ಸಿ. ಕ್ರೀಡಾ ಕಾರ್ಯದರ್ಶಿ- ದೀಕ್ಷಿತ್ ರೈ ಅಂತಿಮ ಬಿಎ. ಜತೆ ಕಾರ್ಯದರ್ಶಿ- ದಿಶಾ ರೈ ದ್ವಿತೀಯ ಬಿಎಸ್ಡಬ್ಲೂ ಅಯ್ಕೆಯಾಗಿದ್ದಾರೆ.

See also  ಶಾಮ್ಲಿ: ಮಗಳನ್ನು ಹತ್ಯೆಗೈದ ತಂದೆಯ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು