News Kannada
Saturday, June 03 2023
ಮಂಗಳೂರು

ಬಂಟ್ವಾಳ: ವಿವೇಕಾನಂದರ ಜನ್ಮದಿನಾಚರಣೆ ಪ್ರಯುಕ್ತ ಯುವ ಪಥ- ಯುವ ಜಾಗೃತಿ ಕಾರ್ಯಕ್ರಮ

Yuva Patha - Youth Awareness Programme on the occasion of Vivekananda's birth anniversary
Photo Credit : By Author

ಬಂಟ್ವಾಳ: ದ.ಕ.ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ದ.ಕ.ಜಿಲ್ಲಾ ಯುವ ಜನ ಒಕ್ಕೂಟ ಮಂಗಳೂರು, ತಾಲೂಕು ಯುವ ಜನ ಒಕ್ಕೂಟ ಬಂಟ್ವಾಳ ಹಾಗೂ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಇವರ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಪ್ರಯುಕ್ತ ಯುವ ಸಪ್ತಾಹ ಮತ್ತು ವಿವೇಕ ರಥ , ಯುವಪಥ- ಯುವ ಜಾಗೃತಿ ಕಾರ್ಯಕ್ರಮ ಕಲ್ಲಡ್ಕ ಶ್ರೀರಾಮ ಪ್ರಥಮ‌ ದರ್ಜೆ ಮಹಾವಿದ್ಯಾಲಯದಲ್ಲಿ ನಡೆಯಿತು.

ಕಲ್ಲಡ್ಕ ಪೇಟೆಯಲ್ಲಿ ಸ್ವಾಮಿ ವಿವೇಕಾನಂದರ ಸ್ತಬ್ಧ ಚಿತ್ರದ ರಥವನ್ನು ಶಾಸಕ ರಾಜೇಶ್ ನಾಯ್ಕ್ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಅವರು ಪುಷ್ಪಾರ್ಚನೆಯ ಮಾಡುವ ಮೂಲಕ ಸ್ವಾಗತಿಸಿದರು.

ಬಳಿಕ ಕಲ್ಲಡ್ಕ ಕಾಲೇಜು ವಿದ್ಯರ್ಥಿಗಕ ಮಕ್ಕಳ ಮೆರವಣಿಗೆಯ ಮೂಲಕ ರಥಯಾತ್ರೆ ಕಾಲೇಜಿಗೆ ತೆರಳಿತು. ರಥಯಾತ್ರೆಯ ಬಳಿಕ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಲ್ಲಡ್ಕ ಡಾ | ಪ್ರಭಾಕರ್ ಭಟ್ ,ಸ್ವಾಮಿ ವಿವೇಕಾನಂದ ಸರ್ವ ಶ್ರೇಷ್ಠ ವ್ಯಕ್ತಿಗಳ ಸಾಲಿನಲ್ಲಿ ಇವರು ಓರ್ವರಾಗಿದ್ದು, ಇದೇ ರೀತಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಅನೇಕ ಮಹಾನ್ ಚೇತನಗಳ ಸಾಹಸದ ಕಥೆಯನ್ನು ಯುವಪೀಳಿಗೆಗೆ ತಿಳಿಸುವ ಕೆಲಸ ಬಹುಮುಖ್ಯವಾಗಿ ಆಗಬೇಕಾಗಿದೆ. ಅ ಮೂಲಕ ದೇಶದ ಸಂಸ್ಕೃತಿಯನ್ನು, ಪರಂಪರೆಯನ್ನು ಮತ್ತೆ ಮತ್ತೆ ಮೆಲುಕು ಹಾಕುವ ಕೆಲಸ ಆಗಬೇಕು ಎಂದು ಅವರು ತಿಳಿಸಿದರು.

ಹಂತ ಹಂತವಾಗಿ ದೇಶದ ಮಹಾನ್ ನಾಯಕರುಗಳ ಪರಿಚಯ ಮಾಡುವುದರ ಜೊತೆ ಸಾಹಸದ ಕೆಲಸಗಳನ್ನು ಪರಿಚಯಿಸುವ ಕೆಲಸ ನಡೆಯಬೇಕಾಗಿದೆ. ಹಿಂದೂ ಎಂಬ ಪದ ಜಗತ್ತಿನಲ್ಲಿ ಶ್ರೇಷ್ಟವಾದ ಹಾಗೂ ಎಲ್ಲರಿಗೂ ಒಳಿತು ಮಾಡುವ ಪದ,ಅದಕ್ಕೆ ಸ್ಪೂರ್ತಿ ಸ್ವಾಮಿ ವಿವೇಕಾನಂದರು, ಎಂದು ಅವರು ಹೇಳಿದರು.

ಜಗತ್ತಿಗೆ ಬದಲಾವಣೆ, ಶಾಂತಿ, ಸುವ್ಯವಸ್ಥೆ ,ಸಾಮಾಜಿಕ ಪರಿವರ್ತನೆಯ ಸ್ವಾಮಿ ವಿವೇಕಾನಂದರ ಕನಸು ಇಂದು ಪ್ರಧಾನಿ ನರೇಂದ್ರ ಮೋಧಿಯವರ ಮೂಲಕ ನನಸಾಗುತ್ತಿದೆ. ಭಾರತ ಎತ್ತರಕ್ಕೆ ಬೆಳೆಯುತ್ತಿದೆ ಎಂಬ ಸಂತೋಷ ವ್ಯಕ್ತಪಡಿಸಿದರು.

ಕಾಲೇಜಿನ ಪ್ರಾಂಶುಪಾಲ ಕೃಷ್ಣ ಪ್ರಸಾದ್ ಕಾಯೆರ್ ಕಟ್ಟೆ, ಇಲಾಖೆಯ ನಿರ್ದೇಶಕ ರಾಕೇಶ್ ರೈ ಕಡೆಂಜ, ಯುವ ಜನ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಮಾಣಿ ಜಿ.ಪಂ.ಮಾಜಿ ಸದಸ್ಯ ಚೆನ್ನಪ್ಪ ಆರ್ ಕೋಟ್ಯಾನ್, ಜಿಲ್ಲಾ ನೊಡೆಲ್ ಅಧಿಕಾರಿ ಮಾಮಚ್ಚನ್, ಶಿಕ್ಷಕ ನವೀನ್ ಉಪಸ್ಥಿತರಿದ್ದರು.

ಬಂಟ್ವಾಳ ಯುವಜನ ಒಕ್ಕೂಟದ ಕಾರ್ಯದರ್ಶಿ ದಿನೇಶ್ ಅಮ್ಟೂರು ಸ್ವಾಗತಿಸಿದರು. ವಿದ್ಯಾರ್ಥಿನಿ ಹರ್ಷಿತಾ ಎನ್ . ವಂದಿಸಿದರು. ವಿದ್ಯಾರ್ಥಿ ಜಯ್ ದೀಪ್ ಕಾರ್ಯಕ್ರಮ ನಿರೂಪಿಸಿದರು.

See also  ಮಂಗಳೂರು ಮಿಲಾಗ್ರಿಸ್ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಆರಂಭೋತ್ಸವ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

153
Mounesh V

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು