News Kannada
Monday, October 02 2023
ಮಂಗಳೂರು

ಬಂಟ್ವಾಳ:  ” ಗ್ರಾಮವಿಕಾಸ ಯಾತ್ರೆ ” ಗ್ರಾಮದೆಡೆಗೆ ಶಾಸಕರ ನಡಿಗೆ

Grama Vikasa Yatra
Photo Credit : News Kannada

ಬಂಟ್ವಾಳ: ಬಂಟ್ವಾಳ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತ್ರತ್ವದಲ್ಲಿ ನಡೆಯುತ್ತಿರುವ   ” ಗ್ರಾಮವಿಕಾಸ ಯಾತ್ರೆ ”  ಗ್ರಾಮದೆಡೆಗೆ ಶಾಸಕರ ನಡಿಗೆ ಪಾದಯಾತ್ರೆಯ 7 ನೇ ದಿನವಾದ ಜ. 20 ರ ಶುಕ್ರವಾರ ಬಂಟ್ವಾಳ ಇತಿಹಾಸ ಪ್ರಸಿದ್ಧ ನೇತ್ರಾವತಿ ನದಿ ತಟದಲ್ಲಿರುವ ವಟಪುರ ಎಂದು ಪ್ರಸಿದ್ಧ ಪಡೆದ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಿಂದ ಆರಂಭಗೊಂಡಿತು.

ಜ.19 ರಂದು ಶಂಭೂರು ಸಮೀಪದ ನೀರಪಾದೆ ಎಂಬಲ್ಲಿ ಸಾರ್ವಜನಿಕ ಸಭೆ ನಡೆಸಿದ ಬಳಿಕ ಬಿ.ಕಸ್ಬಾ ಗ್ರಾಮದ ಜಕ್ರಿಬೆಟ್ಟು ಬಿಜೆಪಿ ಕಾರ್ಯಕರ್ತೆ ಮಲ್ಲಿಕಾ ಶೆಟ್ಟಿ ಅವರ ಮನೆಯಲ್ಲಿ ವಾಸ್ತವ್ಯ ಹೂಡಿದ್ದ ಶಾಸಕರು ಬೆಳಿಗ್ಗೆ ಪ್ರಾತ:ಕಾಲದಲ್ಲಿ ವೆಂಕಟರಮಣ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬಳಿಕ ಪಾದಯಾತ್ರೆಯಲ್ಲಿ ಸಾಗಿದರು.

ಪಾದಯಾತ್ರೆಯಲ್ಲಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ನಗರ ನೀರು ಸರಬರಾಜು ಹಾಗೂ ಒಳಚರಂಡಿ ನಿಗಮ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಜಿ.ಪಂ.ಮಾಜಿ ಸದಸ್ಯರಾದ ತುಂಗಪ್ಪ ಬಂಗೇರ, ಕಮಲಾಕ್ಷಿ ಪೂಜಾರಿ, ಪಾದಯಾತ್ರೆ ಸಂಚಾಲಕರಾದ ಮಾದವ ಮಾವೆ, ಸುದರ್ಶನ್ ಬಜ, ದೇವಸ್ಥಾನದ ಆಡಳಿತ ಮೊಕೇಸರ ಅಶೋಕ್ ಶೆಣೈ, ಟ್ರಸ್ಟಿ ಭಾಮಿ ನಾಗೇಂದ್ರ ನಾಥ್ ಶೆಣೈ, ಭಾಮಿ ನಾರಾಯಣ ಶೆಣೈ, ನಾಗೇಂದ್ರ ವಿ.ಬಾಳಿಗ, ಗಿರೀಶ್ ಪೈ ರವೀಂದ್ರ ಪ್ರಭು, ಗಿರಿಧರ್ ಬಾಳಿಗಾ, ಮಹೇಶ್ ಬಾಳಿಗ, ರಮಾನಾಥ ಪೈ, ರೇಖ ಪೈ, ಶಶಿಕಲಾ, ಮೀನಾಕ್ಷ ಗೌಡ, ಸುರೇಶ್ ಕುಲಾಲ್, ಪ್ರಮುಖರಾದ ರಾಮ್ ದಾಸ ಬಂಟ್ವಾಳ, ಉದಯಕುಮಾರ್ ರಾವ್, ಪುರಸಭಾ ಸದಸ್ಯರುಗಳು, ಗ್ರಾಮಪಂಚಾಯತ್ ಅಧ್ಯಕ್ಷ ರುಗಳು, ಸದಸ್ಯರುಗಳು, ಕ್ಷೇತ್ರ ಸಮಿತಿ ಪ್ರಮುಖರು ಹಾಗೂ ಸಾವಿರಾರು ಕಾರ್ಯಕರ್ತರು ಹೆಜ್ಜೆ ಹಾಕಿದರು.

ಪಾದಯಾತ್ರೆಗೆ ಸಾಥ್ ನೀಡಿದ ಶಾಸಕ ವೇದವ್ಯಾಸ ಕಾಮತ್

ಏಳನೇ ದಿನದ ಪಾದಯಾತ್ರೆಯಲ್ಲಿ ಮಂಗಳೂರು ಶಾಸಕ‌ ವೇದವ್ಯಾಸ ಕಾಮತ್ ಅವರು ಶಾಸಕರ ಜೊತೆ ನಡಿಗೆಗೆ ಸಾಥ್ ನೀಡಿದರು. ಮುಂಜಾನೆ ವೇಳೆ ವೆಂಕಟರಮಣ ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಭಾಗವಹಿಸಿ ಬಳಿಕ ಶಾಸಕರ ಜೊತೆಗೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ಬಳಿಕ ಮಾತನಾಡಿದ ಅವರು ಅಪಾರ ಮಳೆಯಿಂದ ಹಾನಿ ಜೊತೆಗೆ ಕೊರೊನಾ ಸಂಕಷ್ಟದ ದಿನಗಳಲ್ಲಿ ಬಂಟ್ವಾಳ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿ , ಬಹಳ ದೊಡ್ಡ ಕೊಡುಗೆ ನೀಡಿದ್ದಾರೆ.ಇವರ ಸಾಧನೆಯನ್ನು ಹಾಗೂ ಕೇಂದ್ರ , ರಾಜ್ಯ ಸರಕಾರದ ಯೋಜನೆಗಳನ್ನು ಜನರಿಗೆ ತಿಳಿಸುವ ದೃಷ್ಟಿಯಿಂದ ಗ್ರಾಮ ಗ್ರಾಮಗಳಲ್ಲಿ ಪಾದಯಾತ್ರೆಯ ಮೂಲಕ ತೆರಳಿ ತಿಳಿಸುವ ಬಹಳ ದೊಡ್ಡ ಕೆಲಸ ಶಾಸಕ ರಾಜೇಶ್ ‌ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತ್ರತ್ವದಲ್ಲಿ ನಡೆಯುವ ಕಾರ್ಯ ಅತ್ಯಂತ ಉತ್ತಮ ಕಾರ್ಯವಾಗಿದೆ.

See also  ಕೆನಡಾ: 1,444 ಮಂಕಿಪಾಕ್ಸ್ ಪ್ರಕರಣ ದೃಢ

ಮಂಗಳೂರು ಕುಕ್ಕರ್ ಬಾಂಬ್ ಸಹಿತ ಅನೇಕ ಸಮಾಜಘಾತುಕ ಘಟನೆಗಳಿಗೆ ಬೆಂಬಲ ನೀಡಿದ ,ಕಾಂಗ್ರೇಸ್ ನ ನಿಲುವು ಈ ದೇಶಕ್ಕೆ ಮಾರಕವಾಗಿದೆ. ಹಾಗಾಗಿ ಈ ದೇಶದ ನೆಲ, ಜಲ, ಸಂಸ್ಕೃತಿ ರಕ್ಷಣೆಗಾಗಿ ಬಿಜೆಪಿ ಆಡಳಿತ ಬೇಕಾಗಿದೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿಯ ಅಭಿವೃದ್ಧಿ , ನವ ಬಂಟ್ವಾಳಕ್ಕೆ ಮತ್ತೊಮ್ಮೆ ರಾಜೇಶ್ ನಾಯ್ಕ್ ಅವರು ಶಾಸಕರಾಗಿ ಆಯ್ಕೆಯಾಗ ಬೇಕಾಗಿದೆ. ಆ ನಿಟ್ಟಿನಲ್ಲಿ ಕಾರ್ಯರ್ತರು ವಿರಮಿಸದೆ ಕೆಲಸ ಮಾಡಿ ಎಂದು ಅವರು ಕರೆ ನೀಡಿದರು.

13 ದಿನಗಳ ಕಾಲ ನಿರಂತರವಾಗಿ ದಿನಕ್ಕೆ 30 ಕಿ.ಮೀ ಗಿಂತಲೂ ಅಧಿಕವಾಗಿ ಪಾದಯಾತ್ರೆ ಮ‌ೂಲಕ ಜನರ ಮನೆ,ಮನ ಮುಟ್ಟುವ ಕಾರ್ಯ ಶಾಸಕರು ಮಾಡುತ್ತಿದ್ದು, ಉತ್ತಮ ಜನಬೆಂಬಲ ದೊರಕಿದೆ, ಗ್ರಾಮವಿಕಾಸ ಯಾತ್ರೆ ಯಶಸ್ವಿಯಾಗಲಿ ಎಂದು ‌ಹಾರೈಸಿದರು.

ಶಾಸಕರಿಗಾಗಿ ಕಾದು ಕುಳಿತಿದ್ದ ಭದ್ರ ಗ್ಯಾಸ್ ಮಾಲಕರಾದ 74 ರ ಹಿರಿಯರಾದ ವರದ ಆಚಾರ್ಯರ ಕಾಲಿಗೆರಗಿ ‌ ಮುಂದೆ ಸಾಗಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು