ಬಂಟ್ವಾಳ: ಜ.21 ರಿಂದ ಜ.29 ರವರೆಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯಲಿರುವ ಬಿಜೆಪಿಯ “ವಿಜಯ ಸಂಕಲ್ಪ ಅಭಿಯಾನ” ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕರ ಪತ್ರ ವಿತರಿಸುವ ಮೂಲಕ ಕಕ್ಯೆಪದವು ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಮುಂದಿನ ದಿನಗಳು ಬಿಜೆಪಿಯ ದಿನಗಳಾಗಬೇಕು, ಪ್ರತಿ ಮನೆಯೂ ಭಾರತೀಯ ಜನತಾ ಪಾರ್ಟಿಯ ಮನೆಯಾಗಬೇಕು ಎಂಬ ಯೋಜನೆ, ಯೋಚನೆ ಬಿಜೆಪಿಯದ್ದಾಗಿದ್ದು, ಈ ನಿಟ್ಟಿನಲ್ಲಿ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ಜಾರಿಮಾಡಿದೆ, ಪಕ್ಷ ಸಂಘಟನೆಯ ದೃಷ್ಟಿಯಿಂದ ಕಾರ್ಯಕ್ರಮಗಳು ಪರಿಣಾಮಕಾರಿಯಾಗಲು, ಯಶಸ್ವಿಯಾಗಲು ಕಾರ್ಯಕರ್ತರು ಮುಂದಾಗಿ ಎಂದು ಅವರು ತಿಳಿಸಿದರು.
ಸರ್ವ ಜನರ ಹಿತಕಾಯುವ ಕೇಂದ್ರ, ರಾಜ್ಯ ಸರಕಾರದ ಯೋಜನೆ, ಸಾಧನೆ , ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ನೆನಪು ಮಾಡುವ ಉದ್ದೇಶದಿಂದ ಪ್ರತಿ ಮನೆಯನ್ನೂ ಸಂಪರ್ಕ ಮಾಡಿ, ಕರಪತ್ರ ವನ್ನು ನೀಡಿ ಎಂದು ವಿನಂತಿ ಮಾಡಿದರು.
ವಿಜಯ ಸಂಕಲ್ಪ ಅಭಿಯಾನ ದ ಬಗ್ಗೆ ಮಾಹಿತಿ ನೀಡಿ ಮಾತನಾಡಿದ , ಗ್ರಾಮ ವಿಕಾಸ ಯಾತ್ರೆ ಸಂಚಾಲಕ ದೇವದಾಸ್ ಶೆಟ್ಟಿ, ಅವರು ಕಕ್ಯೆಪದವು ಪಂಚದುರ್ಗಾದ ದೇವಸ್ಥಾನದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿರುವುದು ಸುಯೋಗವಾಗಿದೆ. ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮ ರಾಜ್ಯದಲ್ಲಿ ಗಮನ ಸೆಳೆಯುತ್ತಿದೆ.
ಕಾರ್ಯಕರ್ತರ ಬಳಿಗೆ ಶಾಸಕರು ಬರುತ್ತಿರುವ ವೇಳೆ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ಸಿಕ್ಕಿರುವುದು ಅತ್ಯಂತ ಹೆಮ್ಮೆಯ ವಿಚಾರ ಎಂದು ಅವರು ಹೇಳಿದರು. ಕೇಂದ್ರ ರಾಜ್ಯ ಸರಕಾರದ ಯೋಜನೆಗಳ ಪಟ್ಟಿ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕೆಲಸಗಳು, ಸಾಧನೆಯ ಕರಪತ್ರವನ್ನು ಮನೆಮನೆಗೆ ತಲುಪಿಸುವ ಕಾರ್ಯವೇ ವಿಜಯ ಸಂಕಲ್ಪ ಅಭಿಯಾನದ ಉದ್ದೇಶವಾಗಿದೆ.
ಬಿಜೆಪಿ ಸದಸ್ಯತ್ವ ಅಭಿಯಾನ ನೊಂದಣಿ ಕಾರ್ಯ ಆಗಬೇಕು. ವಿಧಾನ ಸಭಾ ಕ್ಷೇತ್ರದಲ್ಲಿ 249 ಮತಗಟ್ಟೆಗಳಲ್ಲಿ ಜವಬ್ದಾರಿ ಇರುವ ಪ್ರತಿಯೊಬ್ಬರೂ ಅಭಿಯಾನದಲ್ಲಿ ಪಾಲ್ಗೊಂಡು ಪಕ್ಷವನ್ನು ಇನ್ನಷ್ಟು ಬಲಪಡಿಸಲು ಜತೆಯಾಗಬೇಕಾಗಿದೆ. ಇಳಿಯೂರು ಮಹಾವಿಷ್ಣು ದೇವಸ್ಥಾನದಿಂದ ಪ್ರಾರಂಭವಾದ ಪಾದಯಾತ್ರೆ ಮಧ್ಯಾಹ್ನ ಕಕ್ಯೆಪದವು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತಲುಪಿದೆ.
ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್,ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್, ಮಾಜಿ.ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ, ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಪಾದಯಾತ್ರೆಯ ಸಹಸಂಚಾಲಕ ಸುದರ್ಶನ್ ಬಜ,
ಗ್ರಾ.ಪಂ.ಅಧ್ಯಕ್ಷ ಸುರೇಶ್ ಮೈರ, ಚಿದಾನಂದ ರೈ ಕಕ್ಯ ಉಪಸ್ಥಿತರಿದ್ದರು. ಸುದರ್ಶನ್ ಬಜ ಸ್ವಾಗತಿಸಿ, ಪುರುಷೋತ್ತಮ ಶೆಟ್ಟಿ ವಾಮದಪದವು ವಂದಿಸಿದರು.