ಮಂಗಳೂರು: ಮಂಗಳೂರಿನಲ್ಲಿ ಹೈಪ್ರೊಫೈಲ್ ಗಾಂಜಾ ದಂಧೆ ಪ್ರಕರಣ ಸಂಬಂಧ ಮತ್ತೆ ಇಬ್ಬರು ವೈದ್ಯರು ಸೇರಿದಂತೆ 7 ವೈದ್ಯಕೀಯ ವಿದ್ಯಾರ್ಥಿಗಳ ಬಂಧನ ಮಾಡಲಾಗಿದೆ. ಈವರೆಗೆ ಬಂಧಿತರ ಸಂಖ್ಯೆ 24 ಏರಿಕೆಯಾಗಿದೆ.
ಪ್ರತಿಷ್ಠಿತ ಆಸ್ಪತ್ರೆಯ ವೈದ್ಯ ಸಿದ್ದಾರ್ಥ್ ಪವಸ್ಕರ್ ಹಾಗೂ ವೈದ್ಯ ಸುಧೀಂದ್ರ ಬಂಧನ ಮಾಡಲಾಗಿದೆ. , ಯುಪಿ ಮೂಲದ ಡಾ.ವಿದುಶ್ ಕುಮಾರ್, ಡಾ.ಇಶ್ ಮಿದ್ದ, ಕೇರಳದ ಡಾ ಸೂರ್ಯಜಿತ್ ದೇವ್, ಡಾ ಆಯೇಷಾ ಮೊಹಮದ್, ತೆಲಂಗಾಣ ಡಾ ಪ್ರಣಯ್ ನಟರಾಜ್, ಡಾ.ಚೇತನಾ ಹಾಗೂ ದೆಹಲಿ ವಿದ್ಯಾರ್ಥಿನಿ ಶರಣ್ಯ ಎಂದು ತಿಳಿಯಲಾಗಿದೆ. ಗಾಂಜಾ ಕೇಸ್ ನಲ್ಲಿ ಈವರೆಗೆ ಬಂಧಿತರ ಸಂಖ್ಯೆ 24 ಏರಿಕೆಯಾಗಿದೆ.
ಮಂಗಳೂರಿನಲ್ಲಿ ಹೈಪ್ರೊಫೈಲ್ ಗಾಂಜಾ ದಂಧೆ ಪ್ರಕರಣ ನಡೆದಿದ್ದು, ವೈದ್ಯರು, ವಿದ್ಯಾರ್ಥಿಗಳು ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಲಾಗಿತ್ತು. ಬಂಧಿತರ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಹೊರಬಿದ್ದಿದ್ದು, ವಿದ್ಯಾರ್ಥಿನಿಯರು ಮಾದಕ ನಶೆಯ ಚಟಕ್ಕೆ ಬೀಳಲು ಮುಖ್ಯ ಕಾರಣ ಅವರು ಲಿವಿಂಗ್ ಟುಗೆದರ್ ಸಂಬಂಧವನ್ನು ಹೊಂದಿದ್ದರು ಎಂಬುದು ಬಹಿರಂಗವಾಗಿದೆ.
ಇವರಲ್ಲಿ ಬೇರೆ ಬೇರೆ ರಾಜ್ಯಗಳಿಂದ ಬಂದವರಾಗಿದ್ದು, ಒಬ್ಬರನ್ನೊಬ್ಬರು ಪರಿಚಯ ಮಾಡಿಕೊಂಡು ಯುವಕ-ಯುವತಿಯರು ಲಿವಿಂಗ್ ಟುಗೆದರ್ ಎಂದು ಒಟ್ಟಿಗೆ ಇದ್ದರು. ಸೆಕ್ಸ್, ಮಾದಕ ನಶೆಯಲ್ಲಿ ತೇಲಾಡುತ್ತಾರೆ ಎಂಬ ಅಚ್ಚರಿ ಮಾಹಿತಿ ಬಯಲಾಗಿದೆ.
ಮಂಗಳೂರಿನ ಹಲವು ಅಪಾರ್ಟ್ ಮೆಂಟ್ ಗಳಲ್ಲಿ ಲಿವಿಂಗ್ ಟುಗೆದರ್ ಎಂಬ ಹೆಸರಿನಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಒಟ್ಟಾಗಿ ವಾಸ ಮಾಡುತ್ತಿದ್ದು, ಗಾಂಜಾ ನಶೆಯಲ್ಲಿ ತೇಲಾಡಿ..ತಮ್ಮ ಸ್ನೇಹಿತರನ್ನು ಕೂಡ ಇದಕ್ಕೆ ಸೆಳೆಯುತ್ತಿದ್ರು ಎಂಬ ವಿಚಾರ ತನಿಖೆ ವೇಳೆ ಹೊರಬಿದ್ದಿದೆ.
ಮಂಗಳೂರಿನ ಕಾಲೇಜಿನ ವೈದ್ಯರು ಹಾಗೂ ವಿದ್ಯಾರ್ಥಿಗಳು ಈ ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ವೈದ್ಯರಾದ ಡಾ. ಸಮೀರ್(32), ಮಣಿಮಾರನ್ ಮುತ್ತು(28)ರನ್ನು ವಿದ್ಯಾರ್ಥಿನಿಯರಾದ ಡಾ. ನದಿಯಾ ಸಿರಾಜ್ (24), ಡಾ.ವರ್ಷಿಣಿ ಪ್ರತಿ (26), ಡಾ.ರಿಯಾ ಚಡ್ಡ (22), ಡಾ.ಹೀರಾ ಬಸಿನ್ (23) ಹಾಗೂ ವೈದ್ಯ ಡಾ.ಸಮೀರ್ (32), ಮಣಿಮಾರನ್ ಮುತ್ತು (28), ಸ್ಥಳೀಯ ಮಹಮ್ಮದ್ ರವೂಪ್ ಅಲಿಯಾಸ್ ಗೌಸ್ (34) ಬಂಧಿಸಲಾಗಿದೆ. ವಿದ್ಯಾರ್ಥಿಗಳಾದ ಡಾ. ಭಾನು ದಹಿಯಾ (27), ಡಾ.ಕ್ಷಿತಿಜ್ ಗುಪ್ತ (23) ಇವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.