News Kannada
Wednesday, May 31 2023
ಮಂಗಳೂರು

ಮೂಡುಬಿದಿರೆ: ಕ್ಯಾಂಟೀನ್ ಗುತ್ತಿಗೆಯಲ್ಲಿ ಭ್ರಷ್ಟಾಚಾರ ಆರೋಪ- ಕಾಂಗ್ರೆಸ್ ಪ್ರತಿಭಟನೆ

Moodbidri: Congress protests against allegations of corruption in canteen contract
Photo Credit : News Kannada

ಮೂಡುಬಿದಿರೆ: ತಾಲೂಕು ಕಚೇರಿ ಬಳಿಯಿರುವ ಹಳೆ ಪಡಸಾಲೆ ಕಟ್ಟಡವನ್ನು ತಹಶಿಲ್ದಾರ್ ಅವರು ನಿಯಮಬಾಹಿರವಾಗಿ ಬಿಜೆಪಿ ಕಾರ್ಯಕರ್ತರೊಬ್ಬರಿಗೆ ಕ್ಯಾಂಟೀನ್ ನಡೆಸಲು ಗುತ್ತಿಗೆ ನೀಡಲು ಮುಂದಾಗಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕರ‍್ಯಕರ್ತರು ಬುಧವಾರ ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್, ಕ್ಯಾಂಟೀನ್ ಗುತ್ತಿಗೆಯನ್ನು ಬಿಜೆಪಿ ಕಾರ್ಯಕರ್ತನಿಗೆ ನೀಡುವ ಉದ್ದೇಶದಿಂದ ಈ ಬಗ್ಗೆ ಕರೆಯಲಾದ ಸಾರ್ವಜನಿಕ ಟೆಂಡರ್‌ನಲ್ಲಿ ತಹಸೀಲ್ದಾರ್ ಗೌಪ್ಯತೆಯನ್ನು ಕಾಯ್ದಕೊಂಡಿದ್ದರು. ಆದರೂ ವಿಷಯ ತಿಳಿದು ಕಾಂಗ್ರೆಸ್ ಕರ‍್ಯಕರ್ತರೊಬ್ಬರು ಕೂಡ ಅರ್ಜಿ ಸಲ್ಲಿಸಿದ್ದರೂ ತಹಸೀಲ್ದಾರ್ ಅವರು ಶಾಸಕರ ಸೂಚನೆಯಂತೆ ಬಿಜೆಪಿ ಕರ‍್ಯಕರ್ತರೊಬ್ಬರ ಅರ್ಜಿಯನ್ನು ಸಿಂಧುಗೊಳಿಸಿ ಕ್ಯಾಂಟೀನ್ ಗುತ್ತಿಗೆ ನೀಡಲು ಮುಂದಾಗಿದ್ದಾರೆ.

ಈ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿರುವ ಅನುಮಾನ ವ್ಯಕ್ತವಾಗಿದೆ. ತಾಲೂಕು ಕಚೇರಿ ವಿರುದ್ಧ ಈಗಾಗಲೇ ಸಾರ್ವಜನಿಕರಿಂದ ಭ್ರಷ್ಟಾಚಾರದ ಆರೋಪ ಕೇಳಿಬರುತ್ತಿದ್ದು ಪಡಸಾಲೆಯಲ್ಲಿ ಆರಂಭವಾಗಲಿರುವ ಕ್ಯಾಂಟೀನನ್ನು ಆಡಳಿತದ ಸೌಧದ ಕಲೆಕ್ಷನ್ ಸೆಂಟರನ್ನಾಗಿ ಮಾಡುವ ಸಾಧ್ಯತೆಯಿದೆ.  ಕ್ಯಾಂಟೀನ್ ಗುತ್ತಿಗೆ ನೀಡುವ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮಾಡದಿದ್ದಲ್ಲಿ ಕಾಂಗ್ರೆಸ್ ಪ್ರತಿಭಟನೆಯನ್ನು ಮುಂದುವರಿಸಲಿದೆ ಎಂದು ಎಚ್ಚರಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರ, ಮಹಿಳಾ ಘಟಕದ ಅಧ್ಯಕ್ಷೆ ಸುಪ್ರಿಯಾ ಡಿ. ಶೆಟ್ಟಿ, ಪುತ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಎಪಿಎಂಸಿ ಮಾಜಿ ಸದಸ್ಯ ವಾಸುದೇವ ನಾಯಕ್, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಸುರೇಶ್ ಪ್ರಭು, ಕೊರಗಪ್ಪ, ಪುರಂದರ ದೇವಾಡಿಗ, ಜೊಸ್ಸಿ ಮಿನೇಜಸ್, ಇಮಾಯಿತ್ತುಲ್ಲಾ, ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ, ಪ್ರಮುಖರಾದ ರಾಘು ಪೂಜಾರಿ, ಚಂದ್ರಹಾಸ್ ಸನಿಲ್, ಮಹ್ಮದ್ ಅಸ್ಲಂ ಮತ್ತಿತರರಿದ್ದರು.

See also  ಮಂಗಳೂರು: ಯಶಸ್ವಿಯಾಗಲಿ ಕಂಕನಾಡಿ ಗರಡಿ 150ನೇ ವರ್ಷದ ಸಂಭ್ರಮ- ಬಿ.ಜನಾರ್ದನ ಪೂಜಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು