News Kannada
ಮಂಗಳೂರು

ಮಂಗಳೂರು: ಜಿಲ್ಲಾ ಪಂಚಾಯತ್ ಸಿಇಒ ಡಾ.ಕುಮಾರ್ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ

mangaluru-dr-kumar-wins-state-level-award-in-zilla-panchayat-ceo-category
Photo Credit : News Kannada

ಮಂಗಳೂರು: ಭಾರತ ಚುನಾವಣಾ ಆಯೋಗವು 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು, “Nothing like voting, I vote for sure” “ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸುವಂತೆ ನಿರ್ದೇಶನ ನೀಡಿದ್ದು, ಅದರಂತೆ ರಾಜ್ಯ ಮಟ್ಟದಲ್ಲಿ ಜನವರಿ 25 ರಂದು ಸರ್‌ ಪುಟ್ಟಣ್ಣಚೆಟ್ಟಿ ಪುರಭವನ ಬೆಂಗಳೂರು ಇಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಮಟ್ಟದಲ್ಲಿ ವಿವಿಧ ವಿಭಾಗಗಲ್ಲಿ ಉತ್ತಮ ಸಾಧನೆ ಮಾಡಿದ ಅಧಿಕಾರಿ ಸಿಬ್ಬಂದಿಗಳನ್ನು ಆಯ್ಕೆ ಮಾಡಲಾಗಿದ್ದು, ಅದರಂತೆ   ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ|ಕುಮಾರ್  ರಾಜ್ಯಮಟ್ಟದ ಪ್ರಶಸ್ತಿಗೆ  ಆಯ್ಕೆಯಾಗಿದ್ದರು. ಜಿಲ್ಲಾ ಪಂಚಾಯತ್ ಸಿಇಒ ವಿಭಾಗದಲ್ಲಿ ಆಯ್ಕೆಯಾದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ|ಕುಮಾರ್ ಅವರಿಗೆ ಕರ್ನಾಟಕ ರಾಜ್ಯದ ರಾಜ್ಯಪಾಲರು ಪ್ರಶಸ್ತಿ ನೀಡಿದರು.

ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಸ್ವೀಪ್ (ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾರರ ಭಾಗವಹಿಸುವಿಕೆ) ನೋಡಲ್ ಅಧಿಕಾರಿಗಳಾಗಿದ್ದು ಚುನಾವಣಾ ಸಾಕ್ಷರತಾ ಕ್ಲಬ್ ಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಿ ಅರ್ಹ ಮತದಾರರ ನೋಂದಾಣಿ ಹಾಗೂ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಕಾರ್ಯವನ್ನು ಕೈಗೊಳ್ಳುತ್ತಾರೆ. ಅವುಗಳಲ್ಲಿ ಯುವ ಮತದಾರರ ನೊಂದಾಣಿ, ವಿಶೇಷ ಚೇತನರು, ಇತರೆ ವರ್ಗಗಳ ಮತದಾರರ ನೊಂದಣಿ ಪ್ರಮುಖವಾಗಿವೆ. 2022 ರಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿದ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ರಾಜ್ಯ ಮಟ್ಟದ ಪ್ರಶಸ್ತಿಯನ್ನು ರಾಷ್ಟೀಯ ಮತದಾರರ ದಿನಾಚರಣೆಯ ಅಂಗವಾಗಿ ನೀಡಲಾಯಿತು.

ನ್ಯೂಸ್ ಕನ್ನಡದ ಜೊತೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ  ಡಾ|ಕುಮಾರ್  “ಕೆಲಸವನ್ನು ಮಾಡಿದ್ದೇವೆ ಆ ಮಾಡಿದ ಕೆಲಸವನ್ನು ಗುರುತಿಸಿ ಪ್ರಶಸ್ತಿ ಸಿಕ್ಕಿದೆ. ಚುನಾವಣಾ ಆಯೋಗಕ್ಕೆ ಸಂಬಂಧಿಸಿದಂತೆ ಸ್ಟ್ರೀಟ್ ಆಕ್ಟಿವಿಟಿ ನಲ್ಲಿ ಜನರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಯಕ್ಷಗಾನ ಕಲಾವಿದರನ್ನು ರೈಲ್ವೆ ಸ್ಟೇಷನ್ ಬಸ್ ನಿಲ್ದಾಣ ಕಾಲೇಜುಗಳಿಗೆ ಕಳುಹಿಸಿ ಯುವಜನರಲ್ಲಿ ಮತದಾನದ ಜಾಗೃತಿಯನ್ನು ಮೂಡಿಸಿದ್ದೇವೆ ಇದರಿಂದಾಗಿ ನಮ್ಮ ಜಿಲ್ಲೆಯಲ್ಲಿ ಯಂಗ್ ಎನ್ರೋಲ್ಮೆಂಟ್ ಚನ್ನಾಗಿದೆ ಆಗಿದೆ. ನಮಗೆ ಪ್ರಶಸ್ತಿ ಸಿಗುವುದರ ಜೊತೆಗೆ ಜವಾಬ್ದಾರಿಗಳು ಕೂಡ ಇನ್ನೂ ಹೆಚ್ಚಾಗಿವೆ, ಈ ಹೆಚ್ಚಾದ ಜವಾಬ್ದಾರಿಯನ್ನು ಇನ್ನೂ ಚೆನ್ನಾಗಿ ನಿಭಾಯಿಸಿಕೊಂಡು ಹೋಗಬೇಕಾಗಿದೆ” ಎಂದರು.

See also  ರಾಜಕೀಯ ಪಕ್ಷಗಳ ಸಂಭ್ರಮಾಚರಣೆ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಹಿಂಪಡೆದ ಚುನಾವಣಾ ಆಯೋಗ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು