News Kannada
Saturday, June 03 2023
ಮಂಗಳೂರು

ಬಂಟ್ವಾಳ: ಪ್ರತಿಯೊಬ್ಬ ವಿದ್ಯಾರ್ಥಿ ವಿದ್ಯಾಭ್ಯಾಸದ ಜೊತೆಗೆ ಜೀವನ ಮೌಲ್ಯಗಳನ್ನು ಅರಿತುಕೊಳ್ಳಬೇಕು

Every student should realize the values of life along with education
Photo Credit : News Kannada

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ ಅವರ 75 ಲಕ್ಷ ರೂ ಅನುದಾನದಿಂದ ಬಂಟ್ವಾಳ ಕಾಮಾಜೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ಮಿಸಲಾದ ಸೆಮಿನಾರ್ ಹಾಲ್ ಅನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಡ್ ಉಳಿಪ್ಪಾಡಿ ಅವರು ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಿಸಿದರು.

ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮಾತನಾಡಿ, ಕಾಲೇಜುಗಳನ್ನು ಇಂದು ನೈತಿಕ ಶಿಕ್ಷಣದ ಕೊರತೆ ಉಂಟಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ವಿದ್ಯಾಭ್ಯಾಸದ ಜೊತೆಗೆ ಜೀವನ ಮೌಲ್ಯಗಳನ್ನು ಅರಿತುಕೊಳ್ಳುವ ಕಾರ್ಯವಾಗಬೇಕು ಎಂದರು.

ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರಸಾದ್ ಕುಮಾರ್ ರೈ ಶುಭ ಹಾರೈಸಿದರು. ಈ ಸಂದರ್ಭ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಡಾ.ಅಜಕ್ಕಳ ಗಿರೀಶ ಭಟ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಭಾಸ್ಕರ ಕಾಮಾಜೆ, ಉಮೇಶ್, ಸ್ಥಳದಾನಿ ರೋಷನ್ ಮಿನೇಜಸ್, ಕಾಲೇಜಿನ ಹಿತೈಷಿ ಫೆಲಿಕ್ಸ್‌ ಡಿಸೋಜ, ಅಭಿಯಂತರ ಪ್ರಮೋದ್‌ ಉಪಸ್ಥಿತರಿದ್ದರು. ಕಾಲೇಜು ಪ್ರಿನ್ಸಿಪಾಲ್‌ ಡಾ. ಪ್ರಕಾಶಚಂದ್ರ ಬಿ. ಸ್ವಾಗತಿಸಿದರು.

ಉಪನ್ಯಾಸಕರಾದ ಡಾ. ಅಚ್ಯುತ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕಾದ ಪ್ರೊ.ಹೈದರಾಲಿ, ಪ್ರೊ.ಶಶಿಕಲಾ, ಕವಿತಾ, ಪ್ರೊ.ಬಾಲಸುಬ್ರಹ್ಮಣ್ಯ, ಅಪರ್ಣಾ ಆಳ್ವ ಅತಿಥಿಗಳನ್ನು ಗೌರವಿಸಿದರು.

ಈ ಸಂದರ್ಭ ಇತ್ತೀಚೆಗೆ ನಿಧನರಾದ ಕೆ.ಸೇಸಪ್ಪ ಕೋಟ್ಯಾನ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

See also  ಜಮ್ಮು ಮತ್ತು ಕಾಶ್ಮೀರ: ರಜೌರಿಯಲ್ಲಿ ಉಗ್ರರ ದಾಳಿಗೆ ನಾಲ್ವರು ನಾಗರಿಕರು ಬಲಿ, 6 ಮಂದಿಗೆ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು