News Kannada
Saturday, June 03 2023
ಮಂಗಳೂರು

ಬಂಟ್ವಾಳ: ಹೆದ್ದಾರಿ ಕಾಮಗಾರಿ ನಡೆಸುವ ಕಂಪೆನಿ ವಿರುದ್ಧ ಸಾರ್ವಜನಿಕರ ಪ್ರತಿಭಟನೆ!

The public is protesting against the company
Photo Credit : News Kannada

ಬಂಟ್ವಾಳ: ರಸ್ತೆ ಮುಚ್ಚಲಾಗಿದೆ ಎಂದು ಆರೋಪಿಸಿ ಸಾರ್ವಜನಿಕರು ಹೆದ್ದಾರಿ ಕಾಮಗಾರಿ ನಡೆಸುವ ಕಂಪೆನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ರಸ್ತೆಗಿಳಿದು ಪ್ರತಿಭಟನೆಗೆ ಮುಂದಾದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಸಾರ್ವಜನಿಕ ರಸ್ತೆಯನ್ನು ಮುಚ್ಚಲಾಗಿದ್ದು, ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ಇಲ್ಲಿನ ನಿವಾಸಿಗಳು ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಕಾಮಗಾರಿಗೆ ಅಡ್ಡಿಪಡಿಸುವುದಕ್ಕೆ ಮುಂದಾದರು.

ಸಾರ್ವಜನಿಕ ರಸ್ತೆಯನ್ನು ಮುಚ್ಚಿ ಕಾಮಗಾರಿ ನಡೆಸುತ್ತಿರುವ ಕಂಪೆನಿ ಖಾಸಗಿ ಜಾಗವನ್ನು ಅತಿಕ್ರಮಣ ಮಾಡಿ ರಸ್ತೆ ನಿರ್ಮಿಸಿ ಕೈ ತೊಳೆದು ಕುಳಿತುಕೊಂಡಿತ್ತು.

ಖಾಸಗಿ ಜಮೀನಿನ ಅತಿಕ್ರಮಣ ಮಾಡಿ ರಸ್ತೆ ನಿರ್ಮಾಣ ಮಾಡಿದ ಬಳಿಕ ಗುತ್ತಿಗೆ ವಹಿಸಿಕೊಂಡ ಕಂಪೆನಿ ಜಮೀನಿನ ಮಾಲಕರ ಜೊತೆಯಾಗಲಿ ಅಥವಾ ಸಾರ್ವಜನಿಕರ ಜೊತೆಯಾಗಲಿ ಮಾತನಾಡುವುದಕ್ಕೆ ಮುಂದಾಗಿಲ್ಲ. ಹಿಗಾಗಿ ಇದೇ ಖಾಸಗಿ ಜಮೀನಿನಲ್ಲಿ ನಿರ್ಮಿಸಿದ ರಸ್ತೆಯನ್ನು ಇವರು ಖಾಯಂ ರಸ್ತೆಯಾಗಿ ಮಾರ್ಪಾಡು ಮಾಡುತ್ತಾರೆ ಎಂದು ಗ್ರಹಿಸಿ ಖಾಸಗಿ ಜಮೀನಿನ ಮಾಲಕ ರಸ್ತೆಯನ್ನು ಬಂದ್ ಮಾಡಿದರು.

ರಸ್ತೆಯನ್ನು ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರು ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಯಿಂದ ಅ ಭಾಗಕ್ಕೆ ತೆರಳಲು ಸಾಧ್ಯವಾಗದೆ ಪರದಾಡುವ ಸ್ಥಿತಿ ನಿರ್ಮಾಣ ವಾಯಿತು.

ಈ ಕಾರಣಕ್ಕಾಗಿ ಗ್ರಾಮಸ್ಥರು ಇಂದು ಜ.30 ರಂದು ಬೆಳಿಗ್ಗೆ ರಸ್ತೆಗಿಳಿದು ಕಾಮಗಾರಿ ನಡೆಸುವ ಕೆಲಸಗಾರರನ್ನು ತರಾಟೆಗೆ ತೆಗೆದುಕೊಂಡರು. ‌ಬಳಿಕ ಕಂಪೆನಿಯ ಡೈರೆಕ್ಟರ್ ಗಳನ್ನು ಸ್ಥಳಕ್ಕೆ ಕರೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಅವರು ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದ ಕಂದಾಯ ಇಲಾಖೆಯ ಅಧಿಕಾರಗಳನ್ನು ಕೂಡ ಕರೆಸಿಕೊಂಡು ಮಾತುಕತೆ ನಡೆಸಿದರು.

ಸಾರ್ವಜನಿಕ ತೊಂದರೆಯಾಗದಂತೆ ರಸ್ತೆಯ ನಿರ್ಮಾಣದ ಭರವಸೆ ನೀಡಿದ ಬಳಿಕ ಇಲ್ಲಿನ ಗ್ರಾಮಸ್ಥರು ಸ್ಥಳದಿಂದ ತೆರಳಿದರು.

See also  ಮಂಗಳೂರು: 18 ವರ್ಷದವರಿಗೆ ಮದ್ಯ ಖರೀದಿಗೆ ಅನುಮತಿ ನೀಡುವುದು ಸರಿಯಲ್ಲ- ಯು.ಟಿ.ಖಾದರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು