News Kannada
Sunday, June 04 2023
ಮಂಗಳೂರು

ಪುತ್ತೂರಿನಲ್ಲಿ ಜೆಡಿಎಸ್ ಕಚೇರಿ ಉದ್ಘಾಟನೆ, ಕಾರ್ಯಕರ್ತರ ಸಭೆ

JD(S) office inaugurated in Puttur, workers meet
Photo Credit : News Kannada

ಪುತ್ತೂರು : ಜೆಡಿಎಸ್ ಪಕ್ಷ ಜಾತ್ಯಾತೀತ ನೆಲೆಯಲ್ಲಿ ಜನಪರ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿರುವ ಪಕ್ಷವಾಗಿದ್ದು, ಮುಂದಿನ ದಿನಗಳಲ್ಲಿ ನಾಯಕರನ್ನು, ಕಾರ್ಯಕರ್ತರನ್ನು ಸೇರಿಸಿಕೊಂಡು ದ.ಕ ಜಿಲ್ಲೆಯಲ್ಲಿ ಪಕ್ಷವನ್ನು ಸಧೃಢವಾಗಿ ಸಂಘಟಿಸಲಾಗುವುದು. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಪಕ್ಷದ ವತಿಯಿಂದ ಪಕ್ಷ ಸಂಘಟನೆ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಲಿದೆ ಎಂದು ಎಂದು ಜೆಡಿಎಸ್ ದ.ಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಹೇಳಿದರು.

ಅವರು ಸೋಮವಾರ ಪುತ್ತೂರು ಅಮರ್ ಕಾಂಪ್ಲೆಕ್ಸ್‌ನಲ್ಲಿ ಜೆಡಿಎಸ್ ಪಕ್ಷದ ಕಚೇರಿ ಉದ್ಘಾಟಿಸಿ ಬಳಿಕ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ನಮ್ಮ ನಾಯಕ ಕುಮಾರಸ್ವಾಮಿಯವರಿಗೆ ಬಲ ತುಂಬಬೇಕಾದರೆ ನಾವು ಪ್ರಾಮಾಣಿಕವಾಗಿ ಪಕ್ಷ ಸಂಘಟಿಸಬೇಕು. ಸಣ್ಣಪುಟ್ಟ ಗೊಂದಲ, ಭಿನ್ನಾಭಿಪ್ರಾಯ ಸಾಮಾನ್ಯವಾಗಿ ತಳಮಟ್ಟದಿಂದ ರಾಜ್ಯಮಟ್ಟದ ವರೆಗೂ ಇರುತ್ತದೆ. ಅವೆಲ್ಲವನ್ನೂ ಪರಿಹರಿಸಿಕೊಂಡು ಹೋಗಬೇಕು. ನಾಯಕರಾದವರಿಗೆ ತಾಳ್ಮೆ ಮುಖ್ಯವಾಗಿರುತ್ತದೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಅವರು ಹೇಳಿದರು.

ಜೆಡಿಎಸ್ ರಾಜ್ಯ ಕಾರ್ಯದರ್ಶಿ ಇಬ್ರಾಹಿಂ ಗೋಳಿಕಟ್ಟೆ ಮಾತನಾಡಿ, ಬಿಜೆಪಿ ಸುಳ್ಳು ಹೇಳುತ್ತಾ ಬೋಗಸ್ ಕೊಡುಗೆಗಳನ್ನು ಪ್ರಕಟಿಸಿ ಜನರನ್ನು ವಂಚಿಸುತ್ತಿದ್ದು ಪುತ್ತೂರಿನಲ್ಲಿ ಕಾಂಗ್ರೆಸ್ ಹೊಸ ಮುಖ ಪರಿಚಯಿಸಿ ವಿನಾಶದ ಕಡೆಗೆ ಹೋಗುತ್ತಿದೆ. ಒಟ್ಟಾರೆಯಾಗಿ ಬಿಜೆಪಿ ಬೆಳೆಯಲು ಕಾಂಗ್ರೆಸ್ ಕಾರಣ ಎಂದು ಹೇಳಿದರು.

ಜೆಡಿಎಸ್ ಪುತ್ತೂರು ವಿಧಾನಸಬಾ ಕ್ಷೇತ್ರದ ಮಾಜಿ ಅಧ್ಯಕ್ಷ ಐ.ಸಿ ಕೈಲಾಸ್ ಮಾತನಾಡಿ, ಚುನಾವಣೆ ಬಂದಾಗ ಮಾತ್ರ ನಾವು ಎಚ್ಚೆತ್ತುಕೊಳ್ಳುವ ಬದಲು ಮೊದಲೇ ಎಚ್ಚೆತ್ತುಕೊಂಡರೆ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಬಹುದು. ಕುಮಾರಸ್ವಾಮಿ ನಮ್ಮ ಜಿಲ್ಲೆಗೆ ಬಂದಾಗ ಅವರ ಜೊತೆ ೫ ನಿಮಿಷ ಮಾತನಾಡಲೂ ತಾಲೂಕು ಸಮಿತಿಯವರಿಗೆ ಅವಕಾಶ ಸಿಗುತ್ತಿಲ್ಲ. ಜಿಲ್ಲಾ ಸಮಿತಿಯವರು ಇದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಅವರು ಹೇಳಿದರು.

ಜೆಡಿಎಸ್ ಹಿರಿಯ ಮುಖಂಡ ಗದಾಧರ್ ಮಲ್ಲಾರ್ ಮಾತನಾಡಿ, ನಾವು ಸಭೆ ನಡೆಸುವುದು ತಡವಾಗಿದ್ದು ಈ ಮೊದಲೇ ಅಖಾಡಕ್ಕೆ ಇಳಿಯಬೇಕಿತ್ತು, ಮುಂದಕ್ಕೆ ಅಭ್ಯರ್ಥಿ ಆಯ್ಕೆಯಾದರೆ ಮೀಟಿಂಗ್ ಮಾಡುವ ಬದಲು ಗ್ರಾಮಗಳಿಗೆ ಹೋಗಿ ಪಕ್ಷ ಸಂಘಟನೆ ಮಾಡಬೇಕು ಎಂದು ಹೇಳಿದರು.

ಪುತ್ತೂರು ನಗರಸಭೆಯ ಮಾಜಿ ಸದಸ್ಯೆ, ಜೆಡಿಎಸ್ ಮುಖಂಡೆ ಝೊಹರಾ ನಿಸಾರ್ ಮಾತನಾಡಿ, ಅಧಿಕಾರಕ್ಕಿಂತ ನಮಗೆ ಪಕ್ಷ ಸಂಘಟನೆ ಮುಖ್ಯವಾಗಬೇಕು. ಬಿಜೆಪಿ, ಕಾಂಗ್ರೆಸ್‌ನಿಂದ ಬೇಸತ್ತಿರುವ ಹಲವರು ಮನೆಯಲ್ಲೇ ಇದ್ದು ಅಂತವರ ಜೊತೆ ನಾವು ಮಾತುಕತೆ ನಡೆಸಬೇಕು ಎಂದರು.

ಬೆಲೆಯೇರಿಕೆ, ಸರಕಾರದ ಆಡಳಿತ ವೈಫಲ್ಯದ ವಿರುದ್ಧ ಹೋರಾಟ, ಪತ್ರಿಕಾಗೋಷ್ಠಿ ಮೂಲಕ ಸದಾ ಧ್ವನಿ ಎತ್ತುವ ಕೆಲಸ ನಮ್ಮಿಂದಾಗಬೇಕು ಎಂದು ಅವರು ಹೇಳಿದರು.

ಜೆಡಿಎಸ್ ದ.ಕ ಜಿಲ್ಲಾ ಕಾರ್ಯಾಧ್ಯಕ್ಷ ನಝೀರ್ ಉಳ್ಳಾಲ, ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಶಾಝಮೀರ್ ಖಾನ್, ಜೆಡಿಎಸ್ ದ.ಕ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರಮೀಝಾ ಬಾನು,

ಪ್ರ.ಕಾರ್ಯದರ್ಶಿಯಾಗಿ ಮಹಾವೀರ್ ಜೈನ್, ನಗರ ಅಧ್ಯಕ್ಷರಾಗಿ ವಿಕ್ಟರ್ ಗೋನ್ಸಾಲಿಸ್ ಆಯ್ಕೆ: ಜೆಡಿಎಸ್ ಪುತ್ತೂರು ವಿಧಾನಸಭಾ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಮಹಾವೀರ್ ಜೈನ್ ಹಾಗೂ ಪುತ್ತೂರು ನಗರ ಅಧ್ಯಕ್ಷರಾಗಿ ವಿಕ್ಟರ್ ಗೋನ್ಸಾಲಿಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

See also  ಬೆಳ್ತಂಗಡಿ: ಕಾರು ಹಾಗೂ ಬೈಕ್ ನಡುವೆ ಅಪಘಾತ

ವೇದಿಕೆಯಲ್ಲಿ ಜೆಡಿಎಸ್ ಪುತ್ತೂರು ಮಹಿಳಾ ಘಟಕದ ಅಧ್ಯಕ್ಷೆ ಪದ್ಮಮಣಿ, ಜೆಡಿಎಸ್ ಜಿಲ್ಲಾ ಮುಖಂಡೆ ಝೋಹರಾ ಉಳ್ಳಾಲ, ಮಹಿಳಾ ಘಟಕದ ಜಿಲ್ಲಾ ಪ್ರ.ಕಾರ್ಯದರ್ಶಿ ಪ್ರಿಯಾ ಸಾಲ್ಯಾನ್, ಯುವಜನತಾ ದಳ ಪುತ್ತೂರು ತಾಲೂಕು ಅಧ್ಯಕ್ಷ ಶಿವ ಸಾಲ್ಯಾನ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು