News Kannada
Wednesday, March 29 2023

ಮಂಗಳೂರು

ಉಜಿರೆಯಲ್ಲಿ ಸಾಹಿತ್ಯ ಸಮ್ಮೇಳನ: ರಾಷ್ಟ್ರ ಧ್ವಜಾರೋಹಣ

Sahitya Sammelan at Ujire: National flag hoisting
Photo Credit : By Author

ಉಜಿರೆ: ಉಜಿರೆಯ ಶ್ರೀಕೃಷ್ಣಾನುಗ್ರಹ ಸಭಾಭವನದ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ ೨೫ನೇಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟç ಧ್ವಜಾರೋಹಣವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ
ರವಿಕುಮಾರ್ ಎಂ. ಆರ್ ನೆರವೇರಿಸಿದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಕನ್ನಡವನ್ನು ಉಳಿಸಿ, ಬೆಳೆಸುವ ಅಗತ್ಯತೆಯನ್ನು ಮನಗಾಣಿಸಿದರು. ಈ ಬಾರಿಯ ಜಿಲಾ ್ಲಕನ್ನಡ ಸಾಹಿತ್ಯ ಸಮ್ಮೇಳನವು ಪವಿತ್ರ ಮತ್ತು ಪುಣ್ಯ ಕ್ಷೇತ್ರದ ಬೀಡುವಾದ ಉಜಿರೆಯಲ್ಲಿ ನಡೆಯುತ್ತಿರುವುದು ಸಂತೋಷಕರ ಎಂದು ಹೇಳಿದರು.

ಕನ್ನಡ ಭಾಷೆ, ಕನ್ನಡ ಸಾಹಿತ್ಯ, ಕನ್ನಡ ನಾಡು-ನುಡಿಗಾಗಿ ದುಡಿದಂತಹ ಹೋರಾಟಗಾರರು, ಚಿಂತಕರು, ಸಾಹಿತಿಗಳು, ಪ್ರಗತಿಶೀಲರು ಸೇರಿದಂತೆ ಹಲವು ಮಹನೀಯರ ಸ್ಮರಣೆ ಅಗತ್ಯ. ಕನ್ನಡ ನಾಡಿನಲ್ಲಿ ಕನ್ನಡವೇ ಶ್ರೇಷ್ಠ ಭಾಷೆ. ಈ ರಾಜ್ಯದ, ಈ ದೇಶದ ಇತಿಹಾಸವನ್ನು ಭಾಷೆಯ ಮುಖಾಂತರ ನಾವು ತಿಳಿದುಕೊಂಡು ನಮ್ಮ ಕನ್ನಡಕ್ಕಾಗಿ ದುಡಿದ ಮಹನೀಯರನ್ನು ನೆನೆಯುವ ಕಾರ್ಯ ಆಗಬೇಕಾಗಿದೆ ಎಂದು ನುಡಿದರು.

ಈ ಸಂದರ್ಭದಲಿ ್ಲಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣವನ್ನು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ ಶ್ರೀನಾಥ್, ಸಮ್ಮೇಳನದ ಧ್ವಜಾರೋಹಣವನ್ನು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ
ನೆರವೇರಿಸಿದರು. ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವಕಾಲೇಜು ವಿದ್ಯಾರ್ಥಿಗಳಿಂದ ರಾಷ್ಟçಗೀತೆ ಮೂಡಿಬಂತು.

ಕಾರ್ಯಕ್ರಮದಲ್ಲಿ ಸಮ್ಮೇಳನ ಸಂಯೋಜನೆ ಸಮಿತಿ ಅಧ್ಯಕ್ಷ ಶರತ್ ಪಡ್ವೆಟ್ನಾಯ, ಸಮ್ಮೇಳನ ಸಂಯೋಜನೆ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಕಾರ್ಯದರ್ಶಿ ರಮೇಶ್ ಮಯ್ಯ, ಎಸ್.ಡಿ.ಎಂ ಪ್ರೌಢಶಾಲೆಯ ಎನ್.ಸಿ.ಸಿ. ಆರ್ಮಿ ಮತ್ತು ನೇವಿ ಕೆಡೆಟ್‌ಗಳು, ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್ ಮತ್ತು ಸಮಿತಿಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಬಂಗಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಅಮಿತಾನಂದ ಹೆಗ್ಡೆ ಮತ್ತು ಮಾಜಿ ಸುಬೇದಾರ್ ಮೇಜರ್ ಜಗನ್ನಾಥ್ ಶೆಟ್ಟಿ ನಿರ್ವಹಿಸಿದರು.

ಚಿತ್ರ ಮತ್ತು ವರದಿ: ಶಶಿಧರ ನಾಯ್ಕ ಎ,  ಉಜಿರೆ

See also  ಬೆಳ್ತಂಗಡಿ: ಮೇ 8 ರಂದು ಜೀವರಕ್ಷಣಾ ಕೌಶಲ್ಯ ತರಬೇತಿಗೆ ಚಾಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು